Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪಡುಕೆರೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ-ಸಂವಿಧಾನ ದಿಂದಲೇ ಭಾರತದಲ್ಲಿ ಪ್ರಜಾತಂತ್ರ ಬದುಕು ಸಾಕಾರಗೊಂಡಿದೆಡಾ. ಸುಧಾಕರ್ karavalivani

ಕೋಟ: ಲಕ್ಷ್ಮಿ ಸೋಮ ಬಂಗೇರ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರ ವಿಭಾಗದಿಂದ ಆಯೋಜಿಸಲ್ಪಟ್ಟ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಸುಧಾಕರ್ ದೇವಾಡಿಗ ಭಾರತದಲ್ಲಿ ಸಂವಿಧಾನದಿಂದ ಪ್ರಜಾಪ್ರಭುತ್ವ ಸಾಕಾರಗೊಂಡಿದೆ. ಪ್ರಜಾತಂತ್ರ ಮೌಲ್ಯಗಳಾದ ಸಮಾನತೆ, ಸ್ವಾತಂತ್ರö್ಯ ಮತ್ತು ಹಕ್ಕುಗಳೇನಾದರೂ ಸಾಮಾನ್ಯರಿಗೆ ದೊರಕಿದ್ದರೆ ಮತ್ತು ರಕ್ಷಿಸ್ಪಟ್ಟಿದ್ದರೆ ಅದು ಸಂವಿಧಾನದಿಂದ. ಬಹುರೂಪಿ ದೇಶವಾಗಿದ್ದರೂ ಐಕ್ಯತೆ ಮತ್ತು ಸಮಗ್ರತೆ ಕೂಡ ಸಂವಿಧಾನ ದಿಂದಾಗಿ ಸಾಧ್ಯವಾಗಿದೆ. ಸಂವಿಧಾನ ಕೇವಲ ಆಡಳಿತ ವೈಖರಿಯನ್ನು ನಿರ್ದೇಶಿಸುವ ಗ್ರಂಥವಾಗಿದೆ. ದೇಶವನ್ನು ನಿರ್ಮಾಣ ಮಾಡುವ ರಕ್ಷಿಸುವ ಹಾಗೂ ಎಲ್ಲಾ ಕಳಂಕಗಳನ್ನು ಹೋಗಲಾಡಿಸುವ ಕನಸಿನ ಮಾದರಿ ಎಂದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ಬೋಧಿಸಿ ಸಂವಿಧಾನದ ಆಶಯಗಳನ್ನು ಯುವಜನತೆಗೆ ಅಥೈಸುವ ಅವಶ್ಯಕತೆಯಿದೆ ಎಂದರು. ರಾಜಕೀಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಸಂವಿಧಾನ ದಿನಾಚರಣೆಯ ಔಚಿತ್ಯವನ್ನು ತಿಳಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ, ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕ ಅನಂತ್‌ಕುಮಾರ್ ಸಿ.ಎಸ್, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣ ಎಂ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ     ಡಾ. ಮನೋಜ್ ಕುಮಾರ್, ಕಚೇರಿ ಸಹಾಯಕ ಸುಜೀಂದ್ರ ಭಾಗವಹಿಸಿದ್ದರು. ರಾಜ್ಯಶಾಸ್ತç ವಿದ್ಯಾರ್ಥಿಗಳಾದ ಸುಧೀರ್ ಸ್ವಾಗತಿಸಿದರೆ, ರಕ್ಷಿತಾ ವಂದಿಸಿದರು ಹಾಗೂ ಸಿಂಧೂರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿದ್ಯಾರ್ಥಿಗಳು ಭಾಗವಹಿಸಿದ್ದರು. 
  


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close