ಪತ್ರಿಕಾ ಪ್ರಕಟಣೆ-karavalivani
ದಿನಾಂಕ:- 01.12.2021 ರಂದು ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತçಚಿಕಿತ್ಸೆ ಮತ್ತು ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವನ್ನು ಪಶು ಆಸ್ಪತ್ರೆ ಬ್ರಹ್ಮಾವರ ಆವರಣದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ, ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮಿ ಎಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ , ಆನಂದ ಪೂಜಾರಿ ಹಾಗೂ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು. ಬ್ರಹ್ಮಾವರ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ಅರುಣ್ ಕುಮಾರ್ ಶೆಟ್ಟಿ ಎನ್ ಇವರ ನೇತೃತ್ವದಲ್ಲಿ ANIMAL PROTECTION AND WELFARE SOCIETYಸಂಸ್ಥೆಯ ಮುಖಾಂತರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
