ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಆಧ್ಯಯನ ಕೇಂದ್ರ, ಕುಂದಾಪುರ ರಾಷ್ಟ್ರೀಯ ಯುವ ದಿನ ಮತ್ತು ರಾಷ್ಟ್ರೀಯ ಯುವ ಸಪ್ತಾಹ ಆಚರಣೆ-karavalivani,
ಕೋಟ: “ದೈಹಿಕ ಕ್ಷಮತೆಯ ಜೊತೆಯಲ್ಲಿ ಮಾನಸಿಕ ಕ್ಷಮತೆಯನ್ನು ಇಂದಿನ ಯುವ ಜನತೆ ರೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿನ ದಿನದಲ್ಲಿ ಎದ್ದು ಕಾಣುತ್ತಿದೆ. ಜಂಗಮವಾಣಿಯ ದಾಸ್ಯ, ಗುರಿ ಇಲ್ಲದ ಬದುಕು ದೇಶದ ಸಂಸ್ಕೃತಿಯ ಬಗೆಗಿನ ಕಾಳಜಿಯ ಅವನತಿ ವ್ಯಕ್ತಿಯ ಅದ:ಪತನಕ್ಕೆ ಕಾರಣವಾಗುತ್ತದೆ” ಎಂದು ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ ಹೇಳಿದರು
ಅವರು ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗು ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯುವ ಸಮುದಾಯದ ಸರ್ವಾಂಗೀಣ ಬೆಳವಣಿಗೆ ಹಾಗೂ ಉತ್ತೇಜಿಸುವ ಉದ್ದೇಶದಿಂದ 2022 ರ ಜನವರಿ 12 ರಿಂದ 18 ರವರೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟಿçÃಯ ಯುವ ದಿನ ಮತ್ತು ರಾಷ್ಟಿçÃಯ ಯುವ ಸಪ್ತಾಹದ ವಿದ್ಯುಕ್ತ ಉದ್ಘಾಟನೆಯನ್ನು ನೆರವೇರಿಸಿ ಯುವ ಜನತೆ ಬಗೆಗಿನ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕ 1 ಮತ್ತು 2 ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿ ಡಾ. ಉಷಾದೇವಿ ಜೆ.ಎಸ್., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಕಾರ್ಯಕ್ರಮಾಧಿಕಾರಿಗಳಾದ ಸಂತೋಷ ನಾಯ್ಕ ಹೆಚ್ ಮತ್ತು ಡಾ. ಗೀತಾ ಎಂ ಉಪಸ್ಥಿತರಿದ್ಧರು. ಅಂತಿಮ ಬಿ ಕಾಂ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಂತಿಮ ಎಂ.ಕಾo ನ ನವೀನ ತನ್ನ ಅಭಿಪ್ರಾಯವನ್ನು ಈ ಸಂದರ್ಭದಲ್ಲಿ ಮಂಡಿಸಿದರು. ಕಾರ್ಯಕ್ರಮ ಸಂಘಟಕರಾದ ಸಂತೋಷ ನಾಯ್ಕ ಹೆಚ್. ಸ್ವಾಗತಿಸಿದರು. ಅನುಷಾ ಕೊಠಾರಿ ವಂದಿಸಿದರು. ಅನುಷಾ ಕಾರ್ಯಕ್ರಮ ನಿರ್ವಹಿಸಿದರು.
