ಸಾಲಿಗ್ರಾಮ- ಬಿಡಾಡಿ ಗೋವಿಗಳಿಗೆ ಮುಕ್ತಿ -karavalivani
ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಿಡಾಡಿ ಗೋವುಗಳ ಹಾವಳಿ ದಿನದಿಂದ ದಿನಕ್ಕೆ ಅತಿಯಾದ ಹಿನ್ನಲ್ಲೆಯಲ್ಲಿ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ನಿರ್ದೇಶನದಂತೆ ಗುರುವಾರ ಸಾಲಿಗ್ರಾಮ ಸುತ್ತಮುತ್ತಲಿನ ಪರಿಸರದಲ್ಲಿ ಅಡ್ಡಾಡಿಕೊಂಡಿರುವ ಗೋವುಗಳನ್ನು ನೀಲಾವರದ ಗೋ ಶಾಲೆಗೆ ಕೊಂಡ್ಯೊಯುವ ಮೂಲಕ ಬೀಡಾಡಿ ಗೋವುಗಳ ಕಡಿವಾಣಕ್ಕೆ ಮುಂದಾಗಿದ್ದಾರೆ.
ಇದರಿಂದ ರಸ್ತೆಯಲ್ಲಿ ಅಪಘಾತ ಆಗುವ ಗೋವುಗಳಿಗೆ ಮುಕ್ತಿ ದೊರೆತಂತಾಗಿದೆ ಈಗಾಗಲೇ ಬೀಡಾಡಿ ಗೋವುಗಳು ರೈತರು ಬೆಳೆದ ಬೆಳೆಯನ್ನು ಹಾಳು ಮಾಡುತ್ತಿದ್ದವು ಮತ್ತು ಹಗಲು ರಾತ್ರಿ ರಸ್ತೆಗಳಲ್ಲಿ ನಿಂತು ವಾಹನ ಚಾಲಕರಿಗೆ ರಸ್ತೆಯಲ್ಲಿ ಸಮಸ್ಯೆ ಉಂಟು ಮಾಡುತ್ತಿದ್ದವು ಅದೆಷ್ಟು ವಾಹನ ಸವಾರರು ಸಣ್ಣಪುಟ್ಟ ಅಪಘಾತ ದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಈಗ ರೈತರು ಮತ್ತು ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ
ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ,ಉಪಾಧ್ಯಕ್ಷೆ ಅನುಸೂಯ ಹೇರ್ಳೆ,ಸದಸ್ಯರಾದ ಸಂಜೀವ ದೇವಾಡಿಗ,ರತ್ನನಾಗರಾಜ್ ಗಾಣಿಗ,ಮುಖ್ಯಾಧಿಕಾರಿ ಶಿವ ನಾಯ್ಕ್,ಆರೋಗ್ಯ ನಿರೀಕ್ಷಕಿ ಮಮತಾ,ಪೌರಕಾರ್ಮಿಕರು ಉಪಸ್ಥಿತರಿದ್ದರು.
