Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗುಂಡ್ಮಿಯಲ್ಲಿ ನಡೆದ ರಂಗ ಸಂವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಯಕ್ಷಗಾನ ರಂಗದ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ಹೇಳಿಕೆ-karavalivani

ಕೋಟ: ಯಕ್ಷಗಾನ ಮೊದಲಿನಂತೆ ಉಳಿಯಬೇಕಾದರೆ ಸರಕಾರ ಅದನ್ನು ಎತ್ತಿಹಿಡಿಯಬೇಕು. ಬೇಕಾಗುವಂತಹ ವಾತಾವರಣವನ್ನು ಪೂರಕ ಸ್ಥಿತಿ- ಗತಿಯನ್ನು ಸರಕಾರ ಒದಗಿಸಬೇಕು ಎಂದು ಸಾಂಪ್ರದಾಯಿಕ ಯಕ್ಷಗಾನ ರಂಗದ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ನುಡಿದರು. 
ರಸರಂಗ ಕೋಟವು ಸಮಸ್ತರು ಬೆಂಗಳೂರು ಇದರ ಸಹಯೋಗದಲ್ಲಿ ,ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ದದ ಸಹಕಾರದಲ್ಲಿ  ಸದಾನಂದ ರಂಗಮoಟಪ ಗುಂಡ್ಮಿಯಲ್ಲಿ ನಡೆದ ರಂಗಸoವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಿದ್ದರು. 
ಸಂಪ್ರದಾಯ ಬಲ್ಲ ಹಳೆಯ ಕಲಾವಿದರನ್ನು ಕಲೆಹಾಕಿ,ಉಡುಪಿ ಜಿಲ್ಲೆಯ ಯಕ್ಷಗಾನದ ಕುರಿತಾದ ಯೋಜನೆ-ಯೋಚನೆಗಳನ್ನ ರೂಪಿಸಿಕೊಂಡು ಅದನ್ನ ಅನುಷ್ಠಾನಕ್ಕೆ ತಂದರೆ ಈ ಭಾಗದ ಪಾರಂಪರಿಕ ಕಲೆ ಉಳಿಯುತ್ತದೆ ಎಂದರು.
ಐರೋಡಿಯವರು ಸಾಂಪ್ರದಾಯಿಕ ಯಕ್ಷಗಾನ  ಹಾಗೂ ಯಕ್ಷಗಾನದ  ಪಾರಂಪರಿಕ ಶೈಲಿಯ ಓರ್ವ ಶ್ರೇಷ್ಟ ಕಲಾವಿದ. ಇಂತಹ ಕಲೆ ಮುಂದೆಯೂ ಉಳಿಯಬೇಕಾದರೆ ಅದನ್ನು  ಕಲಿಸುವ -ಕಲಿಯುವ ಕೆಲಸವಾಗಬೇಕು ಅಂತಹ ಆಸಕ್ತ  ಕಲಾಕೇಂದ್ರಗಳಿಗೆ ಸರಕಾರದ ಪ್ರೋತ್ಸಾಹ ಬೇಕು ಎಂದರಲ್ಲದೆ ಸರಕಾರವು ಆ  ಉದ್ದೇಶಕ್ಕಾಗಿಯೇ ಕಲಾಕೇಂದ್ರಗಳನ್ನ ಪ್ರೋತ್ಸಾಹಿಸಬೇಕು ಅಂತರಾಷ್ಟ್ರೀಯ ಖ್ಯಾತಿಯ ರಂಗನಿರ್ದೇಶಕರು  ಗೋಷ್ಟಿಯ ಅಧ್ಯಕ್ಷ ಗೋಪಾಲಕೃಷ್ಣ ನಾಯರಿಯವರು ನುಡಿದರು.
ಕಾರ್ಕಳದಲ್ಲಿ ಮುಂದೆ ಬರಲಿರುವ ಯಕ್ಷರಂಗಾಯಣ ಈ ಭಾಗದ ಪ್ರಾದೇಶಿಕ  ಯಕ್ಷಗಾನಕ್ಕೆ ಹೆಚ್ಚಿನ ಮನ್ಮಣೆಯನ್ನು  ನೀಡಲಿ,ಅಲ್ಲಿ ಸಾಂಪ್ರದಾಯದ ಯಕ್ಷರೆಪರ್ಟ ಅರಂಭವಾಗಲಿ ಎಂದು ಸಂವಾದಕರಲ್ಲಿ ಒಬ್ಬರಾದ ಸುರೇಂದ್ರ ಪಣಿಯೂರುರವರು ಅಭಿಪ್ರಾಯಿಸಿದರು.
ಸಂವಾದಕ ಮಿತ್ರರಾಗಿ ಸದಾನಂದ ಪಾಟೀಲ್,ಸುರೇಂದ್ರ ಪಣಿಯೂರು,ಗಣೇಶ್ ಜಿ.ಚಲ್ಲೆಮಕ್ಕಿ,ಪ್ರೊ.ಸಂಜೀವ ಗುಂಡ್ಮಿ ಸಹಕರಿಸಿದರು. 
ಕಲಾಕೇಂದ್ರದ ಸಂಚಾಲಕರಾದ ರಾಜಶೇಖರ ಹೆಬ್ಬಾರ್,ರಸರಂಗದ ಅಧ್ಯಕ್ಷೆ ಸುಧಾ ಮಣೂರುರವರು ಉಪಸ್ಥಿತರಿದ್ದರು. ರಾಮಚಂದ್ರ ಐತಾಳ ಗುಂಡ್ಮಿ ಇವರು ಗೋಷ್ಟಿಯನ್ನು ನಿರ್ವಹಿಸಿದರು.
ರಸರಂಗ ಕೋಟವು ಸಮಸ್ತರು ಬೆಂಗಳೂರು ಇದರ ಸಹಯೋಗದಲ್ಲಿ ,ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ದದ ಸಹಕಾರದಲ್ಲಿ  ಸದಾನಂದ ರಂಗಮoಟಪ ಗುಂಡ್ಮಿಯಲ್ಲಿ ನಡೆದ ರಂಗಸAವಾದ ಕಾರ್ಯಕ್ರಮದಲ್ಲಿಸಾಂಪ್ರದಾಯಿಕ ಯಕ್ಷಗಾನ ರಂಗದ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ನುಡಿದರು. ಸಂವಾದಕ ಮಿತ್ರರಾಗಿ ಸದಾನಂದ ಪಾಟೀಲ್,ಸುರೇಂದ್ರ ಪಣಿಯೂರು,ಗಣೇಶ್ ಜಿ.ಚಲ್ಲೆಮಕ್ಕಿ,ಪ್ರೊ.ಸಂಜೀವ ಗುಂಡ್ಮಿ ಸಹಕರಿಸಿದರು. 
     ಕಲಾಕೇಂದ್ರದ ಸಂಚಾಲಕರಾದ ರಾಜಶೇಖರ ಹೆಬ್ಬಾರ್,ರಸರಂಗದ ಅಧ್ಯಕ್ಷೆ ಸುಧಾ ಮಣೂರುರವರು ಉಪಸ್ಥಿತರಿದ್ದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close