Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಠಾಣೆಗೆ ನೂತನ ಪಿ ಎಸ್ ಐ ಮಧು.ಬಿ-karavalivani

ಕೋಟ:ಕೋಟ ಆರಕ್ಷರ  ಠಾಣೆಗೆ ನೂನತ ಪಿ.ಎಸ್ ಐ ಆಗಿ ಕಾರ್ಕಳ ನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ   ಮಧು ಬಿ. ನೇಮಕ ನಿಯೋಜನೆಗೊಂಡಿದ್ದಾರೆ. 
ಕಳೆದ 2 ವರ್ಷ 2 ತಿಂಗಳುಗಳ ಕಾಲ ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು,ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು.
ನಗರದೊಳಗೆ ವ್ಯಾಪಾಕವಾಗಿ ನಡೆಯುತಿದ್ದ ಗೋಕಳ್ಳತನ,ಇತ್ಯಾದಿ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಣ ತರುವಲ್ಲಿ ಶ್ರಮಿಸಿದ್ದರು.ಕೊರೊನಾ, ಲಾಕ್ ಡೌನ್ ಅವಧಿಯಲ್ಲಿ ಕಾನೂನಿಗೆ ತೊಡಕಾಗದ ರೀತಿ ಜನಸಾಮಾನ್ಯರ ಜನಜೀವನಕ್ಕೆ ಹೆಚ್ಚಿನ ತೊಂದರೆಯಾಗದ ರೀತಿ ಕರ್ತವ್ಯ ಪಾಲನೆ ಮಾಡಿ ಸುಶೂತ್ರವಾಗಿ ನಿಭಾಯಿಸಿರುವುದು ಇವರ ಕರ್ತವ್ಯದ ನಿರ್ವಹಣೆಯಾಗಿತ್ತು. ಸಾಮಾನ್ಯ ಜನರು ಸಮಸ್ಯೆಗಳನ್ನು ನೇರ ಇವರ ಬಳಿ ತೆರಳಿ ಹೇಳುವಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಜನಮೆಚ್ಚಿದ ಖಡಕ್ ಅಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಇತ್ತೀಚಿಗೆ ಕೋಟತಟ್ಟು ಕೊರಗ ಕಾಲೋನಿಯ ಪ್ರಕರಣದಲ್ಲಿ ಕೋಟ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಬಿ.ಪಿ ಕರ್ತವ್ಯ ಲೋಪದ ಹಿನ್ನಲ್ಲೆಯಲ್ಲಿ ಅಮಾನತು ಗೊಂಡ ಹಿನ್ನಲ್ಲೆಯಲ್ಲಿ ಮಧು ಬಿ ನೇಮಕಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close