Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ- ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಜಾತ್ರೋತ್ಸವ ಸಂಪನ್ನ-karavalivani

ಕರಾವಳಿ ವಾಣಿ
ಕೋಟ:ಪುರಾಣ ಪ್ರಸಿದ್ಧ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಸೋಮವಾರ ಹಾಗೂ ಮಂಗಳವಾರ ಸಂಪನ್ನಗೊoಡಿತು.
ಸೋಮವಾರ ರಾತ್ರಿ ಹಾಲಿಟ್ಟು ಸೇವೆ ಗೆಂಡೋತ್ಸವ ಕೋವಿಡ್ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ನೆರವೇರಿತು.
ಮಂಗಳವಾರ ಮುಂಜಾನೆ ವರ್ಷಂಪ್ರತಿಯoತೆ ಢಕ್ಕೆ ಬಲಿ,ತುಲಾಭಾರ ಸೇವೆ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ನಡೆಯಿತು.

ಹರಕೆಯ ಗೆಂಡ ಹಾಗೂ ತುಲಾಭಾರ ಸೇವೆ 
ಶ್ರೀ ಕ್ಷೇತ್ರದಲ್ಲಿಪ್ರತಿವರ್ಷ ಭಕ್ತರು ನಾನಾ ರೀತಿಯ ಹರೆಕೆಯನ್ನು ಹೊತ್ತು ಶ್ರೀ ದೇವಳದಲ್ಲಿ ಬರುತ್ತಾರೆ ಅಂತಯೇ ಸಂತನಾ ಆಗದಿದ್ದವರು,ಅನಾರೋಗ್ಯ ಪೀಡಿತರು,ವ್ಯವಹಾರಿಕ ಕ್ಷೇತ್ರ ಹೀಗೆ ನಾನಾ ರೀತಿಯಲ್ಲಿ ಹರಕೆ ಹೊತ್ತು ಶ್ರೀ ಕ್ಷೇತ್ರದ ಜಾತ್ರಾ ಸಂದರ್ಭದಲ್ಲಿ ಹರಕೆ  ಹೆಚ್ಚಾಗಿ ಇಡೇರಿಸಿಕೊಳ್ಳುತ್ತಾರೆ,  ಈ ದಿಸೆಯಲ್ಲಿ ಬ್ರಹ್ಮಾವರ ಸಮೀಪದ ನಿಲಾವರ ಶ್ರೀ ರಕ್ಷಾ ಎನ್ನುವಾಕೆ ಹುಟ್ಟುವಾಗಲೇ ವಿಕಲಚೇತನ(ಬಲಗಾಲು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ) ಅದು ಸರಿ ದೂಗಿದರೆ ಹಲವು ಮಕ್ಕಳ ತಾಯಿ ಕ್ಷೇತ್ರದಲ್ಲಿ ತುಲಾಭಾರ ಸೇವೆ ನೀಡುವೆ ಎಂಬoತೆ ತನ್ನ ಕಾಲಿಗೆ ಫೈಬರ್ ಕೃತಕ ಕಾಲು ಜೋಡಿಸಿ ಯಶಸ್ವಿಯಾದ ಹಿನ್ನಲ್ಲೆಯಲ್ಲಿ ದೇವಳದಲ್ಲಿ ಹರಕೆಯನ್ನು ಸಂದಾಯಗೊಳಿಸಿದರು.
ಈ ಸಂದರ್ಭದಲ್ಲಿ ದೇವಳದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು,ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close