ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ todaynews -karavalivani
ವಿಜಯಪುರ: ಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ.(karavalivani) ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ. earthquake ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಭೂಕಂಪನದಿಂದ ಯಾವುದೇ ಹಾನಿಗಳು ವರದಿಯಾಗಿಲ್ಲ. : ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕನಿಷ್ಠ 15 ಭೂಕಂಪಗಳು ವರದಿಯಾಗಿವೆ. ಭೂಮಿಯಿಂದ ಆಗಾಗೆ ಬರುತ್ತಿರುವ ಶಬ್ಧಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ವಿಜಯಪುರ ಜಿಲ್ಲೆಗೆ ಈಗಾಗಲೇ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು, ವಿಜ್ಞಾನಿಗಳ ತಂಡ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
Earthquake in Vijayapura
ವರದಿಯಲ್ಲಿ ಜಿಲ್ಲೆಯಲ್ಲಿ ಇತ್ತೀಚಿನ ಭೌಗೋಳಿಕ ಬದಲಾವಣೆಗಳ ಬಗ್ಗೆ ವಿವರವಾದ ಅಧ್ಯಯನವನ್ನು ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ವಿಜಯಪುರದಲ್ಲಿ ಪದೇಪದೇ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾದರೆ, ಕೆಲ ಬಾರಿ ಮಾಪನದಲ್ಲಿ ದಾಖಲಾಗಿಲ್ಲ. ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ.

