Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಮೆ- ರಾಮನಾಮ ತಾರಕ ಮಂತ್ರದ ಲಿಖಿತ ಜಪ ಯಜ್ಞದ ಪುಸ್ತಕ ಬಿಡುಗಡೆ-karavalivani


ಕೋಟ: ಶ್ರೀ ಪಟ್ಟಾಭಿ ರಾಮಚಂದ್ರ Ramachandra ಭಜನಾ ಮಂದಿರ ಕೊಮೆ ಕೊರವಡಿ ಇದರ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಆ ಪ್ರಯುಕ್ತ ರಾಮನಾಮ ತಾರಕ ಮಂತ್ರದ ಲಿಖಿತ ಜಪ ಯಜ್ಞದ ಪುಸ್ತಕವನ್ನು ಸಮಿತಿಯ ಗೌರವಾಧ್ಯಕ್ಷ ಆನಂದ ಸಿ ಕುಂದರ್ ಕೋಟ ಇವರು ಬಿಡುಗಡೆ ಮಾಡಿ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದರು. Karavalivani news

ಇದೇ ಸಂದರ್ಭದಲ್ಲಿ ಮನವಿ ಪತ್ರ ಹಾಗೂ ಸಹಾಯ ಧನದ ಕೂಪನ್ ಸಹ ಬಿಡುಗಡೆ ಮಾಡಲಾಯಿತು.ಸಮಿತಿಯ ಅಧ್ಯಕ್ಷ ಎಸ್.ವಿಠ್ಠಲ್ ಪೈ ಸಾಲಿಗ್ರಾಮ, ಭಜನಾ ಮಂಡಳಿಯ ಅಧ್ಯಕ್ಷ ಕೆ.ಚಂದ್ರ ಕಾಂಚನ್,ಕೃಷ್ಣ ಪೂಜಾರಿ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು ಕಾರ್ಯದರ್ಶಿ ರಾಜು ಪೂಜಾರಿ ಸ್ವಾಗತಿಸಿದರು, ಹರೀಶ್ ಕೊರವಡಿ ಕಾರ್ಯಕ್ರಮ ನಿರೂಪಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close