ಕಾರ್ಕಡ ಭಟ್ರಕಟ್ಟೆ ನಿವಾಸಿ ಆತ್ಮಹತ್ಯೆ-karavalivani
ಕೋಟ: ಪರೋಟ ವ್ಯಾಪಾರದಲ್ಲಿ ನಷ್ಟ ಉಂಟಾಗಿ,(latest news) ಸಾಲದ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಜೀವನದಲ್ಲಿ ಮನನೊಂದು ಆತ್ಮಹತ್ಯೆ (suicide)ಮಾಡಿಕೊಂಡು ಘಟನೆ ಸಾಲಿಗ್ರಾಮದ ಕಾರ್ಕಡ ಸಮೀಪ ಭಟ್ರಕಟ್ಟೆಯಲ್ಲಿ ನಡೆದಿದೆ.
ಕಾರ್ಕಡ ಭಟ್ರಕಟ್ಟೆ ನಿವಾಸಿ 43 ವರ್ಷದ ಸುಧಾಕರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ . ಇವರು ಪರೋಟ(Karavalivani) ವ್ಯಾಪಾರ ಮಾಡಿಕೊಂಡಿದ್ದರು. ಪರೋಟ ವ್ಯಾಪಾರಕ್ಕೆ ದೊಡ್ಡ ಪ್ರಮಾಣದ ಬಂಡವಾಳ ಹೂಡಿದ್ದರು. ಆದರೆ, ಇತ್ತೀಚೆಗೆ 3 ವರ್ಷಗಳಿಂದ ವ್ಯಾಪಾರ ಸರಿಯಾಗಿ ಆಗದೇ ಸಾಲದ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ಜೀವನದಲ್ಲಿ ಮನನೊಂದು ನಿನ್ನೆ ಸಂಜೆ ಪರೋಟ ಮಾಡುವ ಶಡ್ ನಲ್ಲಿರುವ ಕಿಟಕಿಯ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

