ವಿವೇಕದ ವಿಶಿಷ್ಟ ಶ್ರೇಣಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಿರಂತರ ಅಧ್ಯಯನದ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈಯಲು ಸಾಧ್ಯ - ಪಿ. ಪ್ರಭಾಕರ ಮೈಯ್ಯ.-karavalivani
ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2021-22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ವಿಜ್ಞಾನ ವಿಭಾಗದ 159 ವಿದ್ಯಾರ್ಥಿಗಳನ್ನು ಗುರುತಿಸಿ ಸಂಮ್ಮಾನಿಸಲಾಯಿತು karavalivani
ಕಾಲೇನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಕೋಟ ವಿದ್ಯಾಸಂಘದ ಅಧ್ಯಕ್ಷ ಸಿ.ಎ. ಪಿ. ಪ್ರಭಾಕರ ಮೈಯ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ‘ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜೊತೆಗೆ ಜೀವನದಲ್ಲಿ ಧೈರ್ಯವಂತರಾಗಿ ಮುನ್ನುಗ್ಗಬೇಕು ಹಾಗೇ ದೃಢ ನಿರ್ಧಾರ, ಸಮಚಿತ್ತತೆ, ಹೊಸ ಹೊಸದಾಗಿ ವಿಚಾರಗಳನ್ನು ಆಲೋಚಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂತಹ ಗುಣಗಳನ್ನು ಬೆಳೆಸಿಕೊಂಡಲ್ಲಿ ನಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ತಿಳಿಸಿದರು.
ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ ಮತ್ತು ಕೋಶಾಧಿಕಾರಿ ವಲೇರಿಯನ್ ಮೆನೇಜಸ್ ಉಪಸ್ಥಿತರಿದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮೊದಲಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ ಗಳಿಸಿದ ಶ್ರೇಯಾ ಆಚಾರ್ ಹಾಗು 9ನೇ ಸ್ಥಾನ ಗಳಿಸಿದ ಶ್ರವಣ್, ಸಿಂಚನಾ, ಗ್ರೀಷ್ಮಾ ಹಾಗು 10ನೇ ಸ್ಥಾನ ಗಳಿಸಿದ ವೈಭವಿ ಶಾಸ್ತಿç ಇವರನ್ನು ವಿಶೇಷವಾಗಿ ಪುರಸ್ಕರಿಸಲಾಯಿತು. ಹಾಗೇಯೇ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮ್ಮುಖದಲ್ಲಿ ಒಂದೇ ವೇದಿಕೆಯಲ್ಲಿ ಪುರಸ್ಕರಿಸಲಾಯಿತು.


