Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪಾಂಡೇಶ್ವರ ಗ್ರಾಮಪಂಚಾಯತ್ -ಸಾಮಾಜಿಕ ಪರಿಶೋಧನೆ ಕುರಿತ ವಿಶೇಷ ಗ್ರಾಮಸಭೆ-karavalivani



ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ (Mahatma Gandhi National Rural Employment Guarantee Scheme) ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2022-23 ನೇ ಸಾಲಿನ ಪ್ರಥಮ ಹಂತದ ಹಾಗೂ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತ ವಿಶೇಷ ಗ್ರಾಮಸಭೆಯು ಪಂಚಾಯತಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. 

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಹಾಯಕ ಕೃಷಿ ಅಧಿಕಾರಿ ಸುರೇಶ್ ಬಂಗೇರ ಸಮುದಾಯದ ಭಾಗವಹಿಸುವಿಕೆ ,ಉತ್ತರದಾಯಿತ್ವ,ಪಾರದರ್ಶಕತೆಯ ಧೇಯೋದ್ದೇಶಗಳ ಆಶಯಗಳನ್ನು ಹೊಂದಿರುವ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರ ಸಹಭಾಗಿತ್ವ ಅತ್ಯಗತ್ಯವೆಂದು ಹೇಳಿದರು.

 ಯೋಜನೆಯ ಉದ್ದೇಶ ಬಗ್ಗೆ ತಾಲೂಕು ಸಂಯೋಜಕ ಹುಸೇನ್ ಸಾಬ್ .ಡಿ. ಕರಣಾಚಿ ತಮ್ಮ ಪ್ರಾಸ್ತಾವಿಕ ನುಡಿಗಳನ್ನಾಡಿದರು.(karavalivani)

 ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಪ್ರತಾಪ್ ಶೆಟ್ಟಿ ಹಾಗೂ ವೈ.ಬಿ.ರಾಘವೇಂದ್ರ ಯೋಜನೆಯ ಉದ್ದೇಶ ಪರಿಪೂರ್ಣವಾಗಬೇಕಾದರೆ ಫಲಾನುಭವಿಗೆ ಕಾಲಕಾಲಕ್ಕೆ ಸರಿಯಾಗಿ ಸಾಮಾಗ್ರಿ ಮೊತ್ತದ ತೀರಾ ವಿಳಂಬನೀತಿ ಸಲ್ಲದು. ಕೂಡಲೇ ಬಾಕಿ ಇರುವ ಸಮಾಗ್ರಿ ಮೊತ್ತವನ್ನು ಫಲಾನುಭವಿ ಖಾತೆಗೆ ಜಮೆಗೊಳಿಸುವಂತೆ ಆಗ್ರಹಿಸಿದರು.

 ಸಭೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕಲ್ಪನಾ ದಿನಕರ್ ಪೂಜಾರಿ,ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜ ಸೇರಿದಂತೆ ಸದಸ್ಯರು ,ಗ್ರಾಮ ಸಂಪನ್ಮೂಲ ವ್ಯಕ್ತಿಗಳು,ನರೇಗಾ ಫಲಾನುಭವಿಗಳು ,ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು. ಕಾರ್ಯದರ್ಶಿ ವಿಜಯ ಭಂಡಾರಿ ಸ್ವಾಗತಿಸಿ ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ನಿರೂಪಿಸಿದರು.

ಪಾಂಡೇಶ್ವರ ಗ್ರಾಮಪಂಚಾಯತ್‌ನ ಮಹಾತ್ಮ ಗಾಂಧಿ  ಗ್ರಾಮ ಪಂಚಾಯತಿ ಅಧ್ಯಕ್ಷ ಕಲ್ಪನಾ ದಿನಕರ್ ಪೂಜಾರಿ,ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close