Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಗ್ರಾಮಪಂಚಾಯತ್‌ನ(Mahatma Gandhi) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ವಿಶೇಷ ಗ್ರಾಮಸಭೆ

 


ಕೋಟ: ಕೋಟ ಗ್ರಾಮಪಂಚಾಯತ್‌ನ (Mahatma Gandhi)ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2022-23 ನೇ ಸಾಲಿನ ಪ್ರಥಮ ಹಂತದ ಹಾಗೂ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತ ವಿಶೇಷ ಗ್ರಾಮಸಭೆಯು ಕೋಟ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 


ತಾಲೂಕು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಓ ಕುಮಾರ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿ ಪಂಚಾಯತ್ ಅಭಿವೃದ್ಧಿಗೆ ನರೇಗಾ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಆ ಮೂಲಕ ಗ್ರಾಮದಲ್ಲಿ (job) ಉದ್ಯೋಗದ ಸೃಷ್ಠಿಸುವ ಕಾಯಕಲ್ಪ ,ಗ್ರಾಮದ ಮನೆ ಮನೆಗಳಲ್ಲಿ ಇಂಗು ಗುಂಡಿ ಸೇರಿದಂತೆ ವಿವಿಧ ತರಹದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಸಾಧ್ಯವಾಗುತ್ತದೆ.ಆಡಳಿತ ವ್ಯವಸ್ಥೆಯಲ್ಲಿ ಎಷ್ಟು ಪಾರದರ್ಶಕವಾಗಿರುತ್ತದೆ ಅಷ್ಟು ನಿರ್ಮಲ ಸ್ವಚ್ಛ ಆಡಳಿತ ಜನಸಾಮಾನ್ಯರಿಗೆ ನೀಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.

ತಾಂತ್ರಿಕ ಸಹಾಯಕ ಇಂಜಿನಿಯರ್ ಪವನ್ ಎಸ್ ನಾಯಕ್,ತಾಲೂಕು ಸಂಯೋಜಕ ಹುಸೇನಸಾಬ ದಾ ಕರನಾಚಿ ,ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ನಿರೂಪಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close