Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಮೂರಕೈ ಸಮೀಪ ಉಪ್ಲಾಡಿ ಸೇತುವೆ ವೀಕ್ಷಣೆ-today news karavalivani

 


ಕೋಟ: ಇಲ್ಲಿನ ಸಾಲಿಗ್ರಾಮಪಟ್ಟಣ ಪಂಚಾಯತ್(karavalivani) ವ್ಯಾಪ್ತಿಯ ಕೋಟ ಮೂರಕೈ ಸಮೀಪ ನೆರೆ ಪೀಡಿತ ಉಪ್ಲಾಡಿ ಸೇತುವೆಯನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮ ಎಂ ರಾವ್(Udupi DC) ವೀಕ್ಷಿಸಿದರಲ್ಲದೆ ಆ ಭಾಗಗಳನೆರೆ ಪೀಡಿತ ಪ್ರದೇಶಗಳಿಗೂ ಭೇಟಿ ಇತ್ತರು.

ಪ.ಪಂ ಸದಸ್ಯ ಶ್ಯಾಮಸುಂದರ ನಾಯರಿ ಭೇಟಿ

ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸಾಲಿಗ್ರಾಮ ಪ.ಪಂ ಸದಸ್ಯ ಶ್ಯಾಮಸುಂದರ ನಾಯರಿ ಮಾತನಾಡಿ ಕುಂದಾಪುರ ತಾಲೂಕಿನ ಕುಂಭಾಶಿಯಿoದ ಸಾಲಿಗ್ರಾಮ ಪ.ಪಂ ವ್ಯಾಪ್ತಿಯ ಚಿತ್ರಪಾಡಿಯವರಗೆ ನೆರೆ ಪೀಡಿತ ಪ್ರದೇಶವಾಗಿ ರೂಪುಗೊಂಡಿದೆ ಇದಕ್ಕೆ ಕಾರಣವಾದ ಉಪ್ಲಾಡಿ,ಗಿಳಿಯಾರು,ಕೊಯ್ಕೂರು ಸೇತುವೆಯ ಅಗಲಕಿರಿದಾದ ಅವ್ಯವಸ್ಥೆಯನ್ನು ಮನಗಾಣಿಸಿದರಲ್ಲದೆ ಈ ಸಂಬoಧ ಸೇತುವೆ ಎತ್ತರಗೊಳಿಸಿ,ಅಗಲಿಕರಣಗೊಳಿಸಿ, ಹೊಳೆ ಭಾಗವನ್ನಯ ಹೂಳೆತ್ತಲು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.



ಡಿ ಸಿ ಭರವಸೆ(Udupi DC) 

ಜಿಲ್ಲಾಧಿಕಾರಿಗಳು ಈ ಕುರಿತು ಮಾತನಾಡಿ ಇಲ್ಲಿ ನಡೆದ ಪ್ರತಿಭಟನೆ ಹಾಗೂ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ ಈ ಕುರಿತು ಸರಕಾರಕ್ಕೆ ವರದಿ ಕಳುಹಿಸಲಾಗಿದೆ ಮುಂದಿನ ಬೇಸಿಗೆಯಲ್ಲಿ ಈ ಕಾಮಗಾರಿಯ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಶಿವ ನಾಯ್ಕ್,ಪಟ್ಟಣಪಂಚಾಯತ್ ಆರೋಗ್ಯ ನೀರಿಕ್ಷಕಿ ಮಮತಾ, ಸ್ಥಳೀಯ ನೆರೆಪೀಡಿತರು ಉಪಸ್ಥಿತರಿದ್ದರು.




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close