ಆ.21- ರೈತರೆಡೆಗೆ ನಮ್ಮ ನಡಿಗೆ, ಸಾವಯುವ ಕೃಷಿ ತಜ್ಞ ಕೆದೂರು ಶಾನಾಡಿ ರಾಮಚಂದ್ರ ಭಟ್ ಇವರಿಗೆ ಗೌರವ-karavalivani
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ 18 ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ(ಆ.21ಭಾನುವಾರ ಬೆಳಿಗ್ಗೆ 10.ಗ ) ನಡೆಯಲಿದೆ ಈ ಬಾರಿ ಕೃಷಿ ಕ್ಷೇತ್ರದಲ್ಲಿ ಅಗಾಧ ಸಾಧನೆಗೈದ ಶಾನಾಡಿ ಪರಿಸರದ ಸಾವಯುವ ಕೃಷಿ ತಜ್ಞ ಕೆದೂರು ಶಾನಾಡಿ ರಾಮಚಂದ್ರ ಭಟ್ ಇವರನ್ನು ಮನೆಯಂಗಳಕ್ಕೆ ತರೆಳಿ ಗೌರವಿಸಲಾಗುವುದು ಎಂದು ಸಂಘಟಕರು ಪ್ರಕಟಣೆ ತಿಳಿಸಿದ್ದಾರೆ.

