Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹತ್ಯೆಕೋರ ಗೋಡ್ಸೆ ದೇವಾಲಯ ಕಟ್ಟುವವರು ಸ್ವಾತಂತ್ರ್ಯ ದ ಬಗ್ಗೆ ಯೋಜನೆ ರೂಪಿಸಲು ನೈತಿಕತೆಯೇ ಇಲ್ಲ- ವಿನಯ್ ಕುಮಾರ್ ಸೊರೆಕೆ-karavalivani


ಕೋಟ: ಸ್ವಾತಂತ್ರ್ಯದ   ಸಂಗ್ರಾಮದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸುವ ಹಾಗೂ ಪ್ರಜಾಪ್ರಭುತ್ವವನ್ನು ಸಾರುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ.ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ

ಕೋಟ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ 75 ನೇ  ಸ್ವಾತಂತ್ರೋತ್ಸವದ ಅಮೃತಮಹೋತ್ಸವ

ಅಂಗವಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರ ಯೋಧರ ತ್ಯಾಗ ಬಲಿದಾನವನ್ನು ನೆನಪಿಸುವ ಹಾಗೂ

ಶಾಂತಿ ಸಾಮರಸ್ಯದ ದೇಶಪ್ರೇಮದ ಸಂದೇಶವನ್ನು ಸಾರುವ ಸಲುವಾಗಿ ಸಾಲಿಗ್ರಾಮದಿಂದ ಕೋಟ  

ಮಾರ್ಗವಾಗಿ ತೆಕ್ಕಟ್ಟೆವರೆಗೆ ಹಮ್ಮಿಕೊಂಡ ಕಾಲ್ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ 

ಸ್ವಾತಂತ್ರ್ಯೋತ್ಸವದ ಕುರಿತಾಗಿ ಹಮ್ಮಿಕೊಂಡ ಹರ್ ಘರ್ ತಿರಂಗ ಫೋಷಿಸಲು ಬಿಜೆಪಿಗೆ ನೈತಿಕತೆ ಇಲ್ಲ 


ಜನಸಾನಾನ್ಯರ ಸ್ವಾತಂತ್ರ್ಯವನ್ನೇ ಕಸಿದು ಆಡಳಿತ ನಡೆಸುವ ಪಕ್ಷ ,ಸ್ವಾತಂತ್ರದ ಬಗ್ಗೆ ಉಲ್ಲೇಖಿಸುವುದು 

ಅದರ ಕುರಿತು ಕಾರ್ಯಕ್ರಮ ಆಯೋಜಿಸುವುದು ಎಷ್ಟು ಸೂಕ್ತ,ಕಾಂಗ್ರೆಸ್ ಸ್ವಾತಂತ್ರ್ಯಕ್ಕೆ ಬಹುದೊಡ್ಡ ಕೊಡುಗೆ 

ನೀಡಿದೆ. ಅದರ ಜೊತೆಗೆ ಕಳೆದ 60ವರ್ಷಗಳಿಂದ ಸಂವಿಧಾನಬದ್ಧವಾದ ಆಡಳಿತ ನಡೆಸಿಕೊಂಡು 

ಬಂದಿದೆ.ಬಡವರ ಬಗ್ಗೆ ಕಾಳಜಿ ಕಾರ್ಯಕ್ರಮಗಳನ್ನು ಸದಾ ನೀಡಿದೆ. ಬಿಜೆಪಿ ಗಾಂಧಿ ಹತ್ಯೆಗೈದ ಗೋಡ್ಸೆ 

ದೇವಾಲಯ ಕಟ್ಟಲು ಶ್ರಮಿಸುತ್ತದೆ, ನೆಹರು,ಇಂದಿರಾ,ರಾಜೀವ್ ಗಾಂಧಿ ಹೀಗೆ ಹಲವು ನಾಯಕರುಗಳು ಈ 

ದೇಶಕ್ಕಾಗಿ ಸದಾ ಶ್ರಮಿಸಿದ ನಾಯಕರುಗಳು ಆದರೆ ಇಂಥಹ ಮಹಾನ್ ನಾಯಕರಗಳ ಬಗ್ಗೆ ಈಗಿನ ಆಡಳಿತ ಪಕ್ಷ 

ಗುಬೆ ಕುರಿಸುವ ಕೆಲಸ ನಿರಂತರವಾಗಿ ಮಾಡುತ್ತಿದೆ.ಪ್ರಸ್ತುತ ವರ್ಷಗಳ ಆಡಳಿತಕ್ಕೆ ಜನಸೋತು 


ಹೋಗಿದ್ದಾರೆ.ಬಿಜೆಪಿ ಪಕ್ಷ ಕೊಲೆಗಡುಕರ ಪಕ್ಷವಾಗಿ ಜನಸಾಮಾನ್ಯರು ಭಯದ ನೆರಳಿನಲ್ಲಿ ಬದುಕುವಂತೆ 

ಮಾಡಿದ್ದಾರೆ,ಕರಾವಳಿಯಲ್ಲಿ ಶಾಂತಿ ಕದಡುವ ಕೆಲಸ ಮಾಡಿ ಅಲ್ಲಿ ಒಂದು ಸಮುದಾಯವನ್ನು ಒಲೈಸುವ ಕೆಲಸ 

ಮಾಡುತ್ತಿದೆ ಒರ್ವ ಮುಖ್ಯಮಂತ್ರಿಯಾಗಿ ಪ್ರವೀಣ್ ಮನೆಗೆ ಹೋಗುತ್ತಾರೆ ಆದರೆ ಮಸೂದ್,ಫೈಝಲ್ ಎನು 

ಮಾಡಿದ್ದಾರೆ ಸಂವಿಧಾನ ಬದ್ಧವಾದ ನ್ಯಾಯ ಎಲ್ಲರಿಗೂ ಸಿಗಬೇಕು ಎಂದು ಮುಖ್ಯ ಮಂತ್ರಿಗಳ ಕಾರ್ಯವೈರಿಯನ್ನು 

ಛೇಡಿಸಿದರು.ಇಂಥವರಿoದ ಸ್ವಾತಂತ್ರ್ಯ ಪಾಠ ಹೇಳಿಸಿಕೊಳ್ಳುವ ಅಗತ್ಯತೆ ಕಾಂಗ್ರೆಸ್‌ಗೆ ಇಲ್ಲ, 

ಇತ್ತೀಚಿಗೆ ನಮ್ಮ ಮಾಜಿಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹುಟ್ಟುಹಬ್ಬದ ಜನಸ್ತೋಮ ನೋಡಿ ಮಡುಗಟ್ಟಿ 

ಹೋಗಿದ್ದಾರೆ ಇದೊಂದು ಇತಿಹಾಸ ಸೃಷ್ಠಿ ಮಾಡಿದೆ ಬದಲಾವಣೆ ಪರ್ವ ಆರಂಭಗೊoಡಿದೆ ಎಂದರಲ್ಲದೆ 

ಸ್ವಾತಂತ್ರ್ಯದ ನೈಜ ಪರಿಭಾಷೆಯನ್ನು ಅರ್ಥಪೂರ್ಣಗೊಳಿಸಲು ಕಾಂಗ್ರೆಸ್ ರಾಷ್ಟçದಲ್ಲಿ ಹಮ್ಮಿಕೊಂಡ ಈ 

ಪಾದಯಾತ್ರೆ ಎಲ್ಲಾ ಭಾಗಗಳಿಂದ ಯಶಸ್ಸಿನ ಹಂತ ತಲುಪಿದೆ ಎಂದರು.

ಉಡುಪಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ,ಕಾಂಗ್ರೆಸ್ ರಾಜ್ಯ 

ಪ್ರಧಾನಕಾರ್ಯದರ್ಶಿ ಎಂ.ಎ ಗಫೂರ್,ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್,ಕುoದಾಪುರ 

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರದಾನಕಾರ್ಯದರ್ಶಿ ಕಿಶನ್ ಹೆಗ್ಡೆ 

ಕೊಳ್ಕೆಬೈಲ್, ಮುಖಂಡರುಗಳಾದ ದೇವಕಿ ಸಣ್ಣಯ್ಯ,ಮಮತಾ ದೇವಾಡಿಗ,ಹೆರಿಯಣ್ಣ ಚಾತ್ರಬೆಟ್ಟು,ರೋನಿ 

ಉಡುಪಿ,ರೋಶನಿ ಒಲೆವೇರ,ಇಚ್ಛಿತಾರ್ಥ ಶೆಟ್ಟಿ, ಉಸ್ತಾದ್ ಅಹಮದ್, ಸತೀಶ್ ಶೆಟ್ಟಿ, ದೇವಾನಂದ್ ಶೆಟ್ಟಿ, ವಿಕಾಸ್ ಹೆಗ್ಡೆ,ಅಜಿತ್ ಶೆಟ್ಟಿ, ರಾಜು ಪೂಜಾರಿ ಪಾರಂಪಳ್ಳಿ,ಶ್ರೀನಿವಾಸ್ ಅಮೀನ್,ಬಾಲಕೃಷ್ಣ ಪೂಜಾರಿ,ಮಲ್ಲಿಕಾ ಪೂಜಾರಿ, ,

ದಿನೇಶ್ ಬಂಗೇರ,ಗಣೇಶ್ ನೆಲ್ಲಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ 

ಹರಿಪ್ರಸಾದ್ ಕಾನ್ಮಕ್ಕಿ ಸ್ವಾಗತಿಸಿದರು.ಕಾರ್ಯಕ್ರಮವನ್ನು ವಿನೋದ್ ಕಾಸ್ತಾ ನಿರೂಪಿಸಿದರು.

ಈ ಮೊದಲು ಕೋಟ ಬ್ಲಾಕ್ ಕಾಂಗ್ರೆಸ್ ಇಂದಿರಾ ಕಚೇರಿಯಿಂದ ಹೊರಟು ಸಾಲಿಗ್ರಾಮದ ಪೇಟೆಯ ಆಂಜನೇಯ 

ದೇವಸ್ಥಾನದ ಮಾರ್ಗದ ಮೂಲಕ ಹಾದುಹೋಗಿ ಕೋಟತಟ್ಟು ಕೋಟಮಾರ್ಗವಾಗಿ ಕುಂದಾಪುರ ಬ್ಲಾಕ್ 

ಕಾಂಗ್ರೆಸ್‌ನ ತೆಕ್ಕಟ್ಟೆಯಲ್ಲಿಪಾದಯಾತ್ರೆ ಸಮಾಪನಗೊಂಡಿತು.ತನ್ನ ಕಾಲುನೋವಿನ ನಡುವೆಯಲ್ಲೂ ಬೈಂದೂರು 

ಮಾಜಿ ಶಾಸಕ ಗೋಪಾಲ ಪೂಜಾರಿ ಪಾದಯಾತ್ರೆಯಲ್ಲಿ ಭಾಗವಹಿಸಿ ಕಾರ್ಯಕರ್ತರಲ್ಲಿ ಹುರುಪು ತುಂಬಿದರು.






ವಾಟ್ಸಾಪ್ ಟ್ರಿಕ್ಸ್..
You have to wait 15 seconds.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close