Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಿರುತೆರೆ ನಟ ಮಂಡ್ಯ ರವಿಪ್ರಸಾದ್ ನಿಧನ(actor Mandya Raviprasad passed away)-karavalivani


@karavalivani, @ಕರಾವಳಿವಾಣಿ

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ.ರವಿಪ್ರಸಾದ್(43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ (Magalu Janaki) ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ (Mandya Ravi) ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ
 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ (Bengaluru) ಬಿಜೆಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ತಂದೆ ತಾಯಿ ಇಬ್ಬರು ಸಹೋದರಿಯರು ಪತ್ನಿ ಪುತ್ರ ಸೇವಂತೆ ಅಪಾರ ಬಂಧು ಬಳಗ ಅಭಿಮಾನಿಗಳನ್ನು ಅಗಲಿರುವ ರವಿಪ್ರಸಾದ್ ಅವರ ಮೃತ ದೇಹದ ಅಂತ್ಯಸಂಸ್ಕಾರ ನಾಳೆ ಗುರುವಾರ ನಗರದ ಕಳ್ಳಹಳ್ಳಿ ಹಿಂದೂ  ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close