Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹಣದ ವ್ಯಾಮೋಹದ ಕಲಾವಿದ ಬೆಳೆಯಲಾರ, ಉಳಿಯಲಾರ: ಪ್ರಾಚಾರ್ಯ ಕೆ.ಪಿ. ಹೆಗಡೆ-Karavalivani


@karavalivani, @ಕರಾವಳಿವಾಣಿ

ಕೋಟ: ಅವಕಾಶಗಳನ್ನು ಹುಡುಕಿ ಮುನ್ನುಗ್ಗಬೇಕು ಕಲಾವಿದ. ಆಗಲೇ ಕಲೆಯು ಇನ್ನಷ್ಟು ಗಟ್ಟಿಯಾಗುತ್ತದೆ. ಕಲಾರಾಧಕ ಕಲಾವಿದ ತನ್ನೊಳಗಿನ ಕಲೆಯನ್ನು ಪ್ರದರ್ಶಿಸುವುದಕ್ಕೆ ಕಾತರನಾಗಿರುತ್ತಾನೆ. ಹಣದ ಹಿಂದೆ ಬೀಳುವ ಕಲಾವಿದ ಬೆಳೆಯಲು ಉಳಿಯಲು ಸಾಧ್ಯವಿಲ್ಲ. ಕಲೆಯನ್ನು ಕಲಾವಿದ ಪ್ರೀತಿಸಿದರೆ ಕಲೆಯು ಕಲಾವಿದನನ್ನು ಅಪ್ಪಿಕೊಳ್ಳುತ್ತದೆ. ಅಪೂರ್ವ ಮೆಲೋಡೀಸ್ ತೆಕ್ಕಟ್ಟೆ ತಂಡ ಕಲೆಯನ್ನು, ಸಂಘಟನೆಯನ್ನು ಗೌರವಿಸುತ್ತದೆ. ಆ ಕಾರಣಕ್ಕೆ ಇವರಿಗೆ ಉಜ್ವಲ ಭವಿಷ್ಯವಿದೆ ಎಂದು ಪ್ರಾಚಾರ್ಯ ಕೆ.ಪಿ. ಹೆಗಡೆ ಅಭಿಪ್ರಾಯ ಪಟ್ಟರು.
ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದಲ್ಲಿ ಸೆ.15ರಂದು, ತೆಕ್ಕಟ್ಟೆ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ಆಯೋಜಿಸಿದ ‘ಭಕ್ತಿ ರಸಮಂಜರಿ’ ಕಾರ್ಯಕ್ರಮದಲ್ಲಿ ಅಪೂರ್ವ ಮೆಲೋಡೀಸ್ ತೆಕ್ಕಟ್ಟೆ ತಂಡದ ಮುಖ್ಯಸ್ಥ ಉಮೇಶ್ ಮಲ್ಯಾಡಿಯವರನ್ನು ಗೌರವಿಸಿ ಪ್ರಾಚಾರ್ಯರು ಮಾತನ್ನಾಡಿದರು.
ಕಾರ್ಯಕ್ರಮದಲ್ಲಿ ಕಲಾವಿದರಾದ ವಿಜಯ್ ಪಡುಕರೆ, ಮಾದವ ಬೀಜಾಡಿ, ಜನಾರ್ಧನ ಕುಂಭಾಶಿ, ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ‘ಭಕ್ತಿ ರಸಮಂಜರಿ ಕಾರ್ಯಕ್ರಮ ರಂಗದಲ್ಲಿ ಸಂಪನ್ನಗೊoಡಿತು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close