ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಕೂಟ -karavalivani
@karavalivani, @ಕರಾವಳಿವಾಣಿ
ಕೋಟ: ದೈಹಿಕ ಕ್ಷಮತೆ ಕ್ರೀಡೆಗೆ ಸಹಕಾರಿ ತನ್ಮೂಲಕ ಕ್ರೀಡೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕೋಟೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೀತಾರಾಮ ಮಧ್ಯಸ್ಥ ಹೇಳಿದರು.
ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ನಡೆದ ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿ ಬಡತನ ಕ್ರೀಡೆಗೆ ಅಡ್ಡಿಯಾಗದು ಇಂದು ಬಡತನದ ಮೂಲಕ ಮೀರಾಚಾನು,ಗುರುರಾಜ್ ಪೂಜಾರಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.ಅವರೇ ಇಂದಿನ ಯುವ ಕ್ರೀಡಾಳುಗಳಿಗೆ
ಆದರ್ಶವಾಗಬೇಕು,ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸುವ ಕಾರ್ಯ ಪೋಷಕರು ಮಾಡಬೇಕಿದೆ ಆ ಮೂಲಕ ವಿಶ್ವಕ್ಕೆ ಭಾರತವನ್ನು ಪರಿಚಯಿಸುವ ಕಾರ್ಯ ಇಂಥಹ ಕಾಲೇಜುಗಳ ಮೂಲಕ ನಡೆಯಲಿ ಎಂದು ಹಾರೈಸಿದರು.
ಆದರ್ಶವಾಗಬೇಕು,ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸುವ ಕಾರ್ಯ ಪೋಷಕರು ಮಾಡಬೇಕಿದೆ ಆ ಮೂಲಕ ವಿಶ್ವಕ್ಕೆ ಭಾರತವನ್ನು ಪರಿಚಯಿಸುವ ಕಾರ್ಯ ಇಂಥಹ ಕಾಲೇಜುಗಳ ಮೂಲಕ ನಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಕೋಶಾಧಿಕಾರಿ ವಲೇರಿಯನ್ ಮೇನೆಜಸ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ,ವಿವೇಕ ಆಂಗ್ಲ ಮಾಧ್ಯಮ ವಿಭಾಗ ಮುಖ್ಯ ಶಿಕ್ಷಕ ಭಾಸ್ಕರ್ ಆಚಾರ್ಯ, ವಿವೇಕ ಬಾಲಕೀಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಗದೀಶ್ ಹೊಳ್ಳ,ಬಾಲಕರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ,ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಂಜುನಾಥ ಉಪಾಧ್ಯ,ತೀರ್ಪುಗಾರರಾಗಿ ದೈಹಿಕ ಶಿಕ್ಷಕರು,ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಶಿವಪ್ರಸಾದ್ ಶೆಟ್ಟಿಗಾರ್ ನಿರೂಪಿಸಿದರು.ದೈಹಿಕ ಶಿಕ್ಷಕ ವಸಂತ್ ಶೆಟ್ಟಿ ವಂದಿಸಿದರು


