Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಾಕು ಪ್ರಾಣಿಗಳ ಜೊತೆಗೆ ಎಚ್ಚರಿಕೆ ಅಗತ್ಯ – ಡಾ| ಅರುಣ್‌ಕುಮಾರ್ ಶೆಟ್ಟಿ-karavalivani


@karavalivani, @ಕರಾವಳಿವಾಣಿ-ಕೋಟ: ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಪ್ರಾಣಿ ದಯಾಸಂಘ ಉಡುಪಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ರೇಬಿಸ್ (ಹುಚ್ಚು ನಾಯಿ ರೋಗ) ಮತ್ತು ಇತರ ಪ್ರಾಣಿ ಜನ್ಯರೋಗದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವಿವೇಕ ಬಾಲಕಿಯರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಪಶುಸಂಗೋಪನೆಯ ಹಿರಿಯ ವೈದ್ಯಾಧಿಕಾರಿ ಡಾ| ಅರುಣ್‌ಕುಮಾರ್ ಶೆಟ್ಟಿಯವರು ಪ್ರಾಣಿಗಳ ಪ್ರೀತಿಯ ಜೊತೆಗೆ ಅವುಗಳ ಕುರಿತು ಎಚ್ಚರಿಕೆಯೂ ಅಗತ್ಯ ಎಂದು ತಿಳಿಸಿದರು. ಪಶುವೈದ್ಯಾಧಿಕಾರಿಗಳಾದ ಮಂಜುನಾಥ್ ಅಡಿಗ ಹಾಗೂ ಪ್ರದೀಪ್ ಕೊಂಡೊಜಿಯವರು ಹುಚ್ಚುನಾಯಿ ರೋಗದ ಕುರಿತು ದೃಕ್‌ಶ್ರವಣದ ಮೂಲಕ ಮಕ್ಕಳಿಗೆ ಮನದಟ್ಟು ಮಾಡಿ ಜಾಗೃತಿ ಮೂಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಜಗದೀಶ ಹೊಳ್ಳರವರು ವಹಿಸಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ವಿಜ್ಞಾನ ಕ್ಲಬ್‌ನ ಕಾರ್ಯದರ್ಶಿ ಎನ್. ತ್ರಿಶಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಜ್ಞಾನ ಕ್ಲಬ್ ಅಧ್ಯಕ್ಷೆ ತ್ರಿಶಾರವರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ರಾಧಾಕೃಷ್ಣ ಭಟ್‌ರವರು ಕಾರ್ಯಕ್ರಮ ಸಂಯೋಜಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close