ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಭೇಟಿ-Karavalivani
ಕೋಟ: ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳಕ್ಕೆ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ (Retired Judge of State High Court)ರಮೇಶ್ ಅಳುವಳ್ಳಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸುಶೀಲಸೋಮಶೇಖರ್ ಶಾಲು ಹೊದಿಸಿ ಪ್ರಸಾದ ವಿತರಿಸಿದರು.ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಳದ ಜೀರ್ಣೋದ್ಧಾರ ಸಮಿತಿ ಮಾಜಿ ಸದಸ್ಯ ಭುಜಂಗ ಗುರಿಕಾರ,ದೇವಳ ಮ್ಯಾನೇಜರ್ ಗಣೇಶ್ ಹೊಳ್ಳ ,ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.

