Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಆನ್​ಲೈನ್ ವಂಚಕರಿಂದ ಹಣ ಕಳೆದುಕೊಂಡರೆ ತಕ್ಷಣ ಹೀಗೆ ಮಾಡಿ: ಹಣ ಪುನಃ ಪಡೆಯಬಹುದು How to Recovering money from cyber scams webnewskannada

 

ಆನ್​ಲೈನ್ ವಂಚಕರಿಂದ ಹಣ ಕಳೆದುಕೊಂಡರೆ ತಕ್ಷಣ ಹೀಗೆ ಮಾಡಿ: ಹಣ ಪುನಃ ಪಡೆಯಬಹುದು How to Recovering money from cyber scams webnewskannada

ಪ್ರಪಂಚದಲ್ಲಿ ಸೈಬರ್ ದರೋಡೆಕೋರರ (Cyber Fraud) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಭಾರತದಲ್ಲಿ ಈ ಬಗ್ಗೆ ದಿನಕ್ಕೊಂದು ಪ್ರಕರಣ ದಾಖಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು.

ಆನ್​ಲೈನ್ ವಂಚಕರಿಂದ ಹಣ ಕಳೆದುಕೊಂಡರೆ ತಕ್ಷಣ ಹೀಗೆ ಮಾಡಿ: ಹಣ ಪುನಃ ಪಡೆಯಬಹುದು How to Recovering money from cyber scams webnewskannada
WEBNEWSKANNADA​​
WebNewsKannada​ | 

Updated on: Oct 00, 2023

ಇದೇರೀತಿಯ ಅನೇಕ ಘಟನೆಗಳು ನಡೆಯುತ್ತಿದೆ. ಅನಾಮಿಕರ ಮಾತು ನಂಬಿ ಒಟಿಪಿ ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ ಇದೆವಿದ್ಯುತ್ ಬಿಲ್, ಓಟಿಪಿ ಮೂಲಕ ಹಣ ದೋಚಿಕೊಳ್ಳುತ್ತಿರುವ ಖದೀಮರು ಈಗೀಗ ಫೋನ್‌ಗೆ ಮಿಸ್ಡ್‌ಕಾಲ್‌ ಕೊಡುವ ಮೂಲಕ ಸಿಮ್ ಸ್ವ್ಯಾಪ್ ಮಾಡಿ ಹಣ ಖದಿಯುವ ರಹಸ್ಯ ದಾರಿಯನ್ನೂ ಹುಡುಕಿದ್ದಾರೆ. ಸೈಬರ್ ಅಪರಾಧದಿಂದ ಸಾರ್ವಜನಿಕರನ್ನು ರಕ್ಷಿಸುವ ಸಲುವಾಗಿ, ಗೃಹ ವ್ಯವಹಾರಗಳ ಸಚಿವಾಲಯವು ಎಸ್​ಎಮ್​ಎಸ್ ಮೂಲಕ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮಗಳ ಮೂಲಕವೂ ಪ್ರಚಾರಗಳನ್ನು ನಡೆಸುವ ಮೂಲಕ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತದೆ. ಆದರೆ ಇದರ ನಂತರವೂ ಘಟನೆಗಳು ನಿರಂತರವಾಗಿ ಹೆಚ್ಚುತ್ತಿವೆ. ಹಾಗಾದರೆ ಆನ್​ಲೈನ್ ವಂಚಕರಿಂದ ಹಣ ಕಳೆದುಕೊಂಡರೆ ಏನು ಮಾಡಬೇಕು?.

ಬೆಂಗಳೂರು ಪೊಲೀಸರು ಪರಿಚಯಿಸಿರುವ “ಗೋಲ್ಡನ್ ಅವರ್” ಎಂಬ ಸೌಲಭ್ಯ ಬಳಿಸಿದರೆ ಸೈಬರ್ ವಂಚಕರ ಜಾಲದಿಂದ ಕಳೆದುಕೊಂಡ ಹಣವನ್ನು ವಾಪಸು ಪಡೆಯಬಹುದು. ಈಗಾಗಲೇ ಈ ಗೋಲ್ಡನ್ ಅವರ್ ಸೌಲಭ್ಯ ಬಳಿಸಿಕೊಂಡು ಸಾವಿರಾರು ಜನರು ಸೈಬರ್ ವಂಚಕ ಜಾಲದಿಂದ ಕಳೆದುಕೊಂಡಿದ್ದ ಹಣವನ್ನು ಮರಳಿ ವಾಪಸು ಪಡೆದಿದ್ದಾರೆ. ಕೊರೊನ ಲಾಕ್‌ಡೌನ್ ಸಮಯದಲ್ಲಿ, ಆನ್‌ಲೈನ್ ವಂಚನೆಯಂತಹ ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿತ್ತು. ಈ ಕಾರಣಕ್ಕಾಗಿ ಗೋಲ್ಡನ್ ಅವರ್ ಸೌಲಭ್ಯ ತರಲಾಗಿತ್ತು.

ನೀವು ಹಣ ಕಳೆದುಕೊಂಡ ಒಂದು ಗಂಟೆಯ ಒಳಗೆ ಪೊಲೀಸ್ ಕಂಟ್ರೋಲ್ ರೂಮ್ 1930 ಗೆ ಕರೆ ಮಾಡಿದರೂ ಆಗುತ್ತದೆ. ಹಣ ಕಳೆದುಕೊಂಡ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿ ಸಿಬ್ಬಂದಿ ಕೇಳುವ ಪೂರ್ಣ ವಿವರ ನೀಡಬೇಕು. ಇಲ್ಲಿ ನಿಮ್ಮ ಮಾಹಿತಿಯನ್ನು ಆಧರಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಅವರು ಬ್ಲಾಕ್ ಮಾಡುತ್ತಾರೆ. ಇದರಿಂದ ನಿಮ್ಮ ಖಾತೆಯಿಂದ ಬೇರೆಯವರಿಗೆ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಇದರ ಜೊತೆಗೆ www.cybercrime.gov.in ಮೂಲಕವೂ ದೂರು ನೀಡಬಹುದು.

ಇನ್ನು ಆರ್‌ಬಿಐನ 114448 ಟೋಲ್‌ ಫ್ರಿ ಸಂಖ್ಯೆಗೆ ಕರೆ ಮಾಡಬಹುದು. https://cms.rbi.org.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸಬಹುದು. ನೀವು ಯುಪಿಐ ಮೂಲಕ ಅಂದರೆ ಗೂಗಲ್‌ ಪೇ, ಫೋನ್‌ ಪೇ ಈರೀತಿಯ ತಾಣದಿಂದ ಹಣ ಕಳೆದುಕೊಂಡರೆ ಆ ಸಂಸ್ಥೆಗೆ ದೂರು ನೀಡಿ, ಇಲ್ಲವಾದಲ್ಲಿ ಕರೆ ಮಾಡಿ ವಿಷಯ ತಿಳಿಸಿ. ಈ ಸಂದರ್ಭ ಅವರು ಕೇಳಿದ ಎಲ್ಲಾ ದಾಖಲೆಗಳು, ಸ್ಕ್ರೀನ್‌ಶಾಟ್​ಗಳನ್ನು ಅವರಿಗೆ ಕಳುಹಿಸಿ. ಬ್ಯಾಂಕ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಕಳೆದುಕೊಂಡರೆ ಆ ಕಂಪನಿಯನ್ನು ಕೂಡಲೇ ಸಂಪರ್ಕಿಸಿ ಮಾಹಿತಿ ನೀಡಿದರೆ ಎಲ್ಲ ಪ್ರೊಸೀಜರ್ ಮುಗಿದ ಬಳಿಕ ನಿಮಗೆ ನಿಮ್ಮ ಹಣ ಪುನಃ ಸಿಗುತ್ತದೆ 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close