Praveen Nettar: ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಣೆ webnewskannada
Praveen Nettar: ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಣೆ

Posted On: WebNews Kannada
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ (Praveen Nettar Case) ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು (Bail Rejected) ನಿರಾಕರಿಸಿದೆ. ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಇಸ್ಮಾಯಿಲ್ ಶಫಿ. ಮೊಹಮ್ಮದ್ ಇಕ್ಬಾಲ್ ಮತ್ತು ಎಂ ಶಾಹೀದ್ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಹೆಚ್ಬಿ ಪ್ರಭಾಕರ್ ಶಾಸ್ತ್ರಿ ಮತ್ತು ನ್ಯಾ.ಅನಿಲ್ ಕೆ ಕಟ್ಟಿ ಅವರ ವಿಭಾಗೀಯ ಪೀಠ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿರುವ ಆರೋಪಿಗಳು (Accused) ಪ್ರಕರಣದಲ್ಲಿ ಸಕ್ರಿಯ ಪಾತ್ರವಹಿಸಿದ ಬಗ್ಗೆ ಸಾಕ್ಷ್ಯಗಳು ಲಭ್ಯ ಇವೆ. ಆದ್ರೆ ಘಟನೆ ನಡೆದ ಸ್ಥಳದಲ್ಲಿ ಮೂವರು ಇರಲಿಲ್ಲ. ಪ್ರವೀಣ್ ನೆಟ್ಟಾರ್ ಹತ್ಯೆಯ ಸಂಚಿನ ಚರ್ಚೆಯಲ್ಲಿ ಭಾಗವಹಿಸಿದ್ದರು. ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.ಮೂವರು ಆರೋಪಿಗಳು ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕೆ ನಾಲ್ಕು ಸಾಕ್ಷ್ಯಗಳಿವೆ. ಆರೋಪಿಗಳ ಫೋನ್ ಕರೆಯಲ್ಲಿ ಸಂಚು ನಡೆಸಿರೋದು ಕಂಡು ಬರುತ್ತದೆ. ಈ ಪ್ರಕರಣದಲ್ಲಿ ಆರೋಪಿಗಳು ಸಕ್ರಿಯ ಮತ್ತು ಗಮನಾರ್ಹ ಪಾತ್ರ ವಹಿಸಿರೋದು ಸಾಕ್ಷ್ಯಗಳಲ್ಲಿ ಕಂಡು ಬಂದಿರುತ್ತದೆ. ಈ ಎಲ್ಲಾ ಸಾಕ್ಷ್ಯಗಳು ನ್ಯಾಯಾಲಯದ ಮುಂದಿವೆ ಎಂದು ಪೀಠ ಹೇಳಿದೆ.
ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1
webnewskannada2



