ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಫ್ರೆಷರ್ಸ್ ಡೇ ಆಚರಣೆ webnewskannada
WEB NEWS KANNADA
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಫ್ರೆಷರ್ಸ್ ಡೇ ಆಚರಣೆ webnewskannada


Posted On: WebNews Kannada
WebNewsKannada ಬ್ರಹ್ಮಾವರ: ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ಕಾರ್ಯಕ್ರಮವನ್ನು ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ
ಆಚರಿಸಲಾಯಿತು .ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪ್ರಮೋದ್ ಮಧ್ವರಾಜ್ ಮಾಜಿ ಮೀನುಗಾರಿಕಾ ಸಚಿವರು ಆಗಮಿಸಿದ್ದರು. ಹಾಗೂ ವಿದ್ಯಾಲಕ್ಷ್ಮೀ ಸಂಸ್ಥೆಯ ಹೆಮ್ಮೆಯ ಹಳೆ ವಿದ್ಯಾರ್ಥಿಗಳಾಗಿರುವ ಕುಮಾರಿ ರಮ್ಯಾ , ಕುಮಾರಿ ಸೌಜನ್ಯ ಮತ್ತು ಪ್ರಭಾಕರ ತಿಂಗಳಾಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಬಡನಿಡಿಯೂರು,ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಅವರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಹಿತನುಡಿಗಳನ್ನಾಡಿ ಶುಭ ಹಾರೈಸಿದರು. ನಿರ್ದೇಶಿಕಿಯಾದ ಶ್ರೀಮತಿ ಮಮತಾ ,ಪ್ರಾಂಶುಪಾಲರಾದ ಶ್ರೀಮತಿ ಡಾ. ಸೀಮಾ ಜಿ ಭಟ್, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು , ಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರೆ ,ಉಪನ್ಯಾಸಕಿ ಶ್ರೀಮತಿ ಮಧುಮಿತಾ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ವಂದಿಸಿದರು
ADSENSE CODE - 1
ADSENSE CODE - 1

<


