Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹಾವೇರಿ ಯುವಕ ರಾಷ್ಟ್ರಪತಿಗಳಿಗೆ ರಕ್ತದಲ್ಲಿ ಪತ್ರ ಬರೆದಿದ್ದು ಯಾಕೆ webnewskannada

ಹಾವೇರಿ ಯುವಕ ರಾಷ್ಟ್ರಪತಿಗಳಿಗೆ ರಕ್ತದಲ್ಲಿ ಪತ್ರ ಬರೆದಿದ್ದು ಯಾಕೆ webnewskannada

Posted On: WebNews Kannada

ಕಾವೇರಿ ನದಿ ನೀರಿಗಾಗಿ ದಿನ ನಿತ್ಯ ವಿನೂತನ ಹೋರಾಟದ ಮೂಲಕ, ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಗಮನ ಸೆಳೆಯುವ ಕಾರ್ಯ ನಿರಂತರವಾಗಿ ನಡೆಯುತ್ತಲೆ ಇದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಯುವಕನೊಬ್ಬ ರಕ್ತದಲ್ಲಿ ಪತ್ರ ಬರೆಯುವುದರ ಮೂಲಕ ಕಾವೇರಿ ಭಾಗದ ರೈತರ ಜೊತೆಗೆ ಕೈ ಜೋಡಿಸಿ ಕಾವೇರಿ ನೀರಿಗಾಗಿ ಹೋರಾಟ ನಡೆಸಿದ್ದಾನೆ.

ಹಾವೇರಿ, ಅ.02: ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ (Cauvery Water Dispute). ಕಾವೇರಿ ನೀರಿಗಾಗಿ ಒಂದೇ ವಾರದಲ್ಲೇ ಎರಡೆರಡು ಬಂದ್​ಗಳು ನಡೆದಿವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರೈತರು ವಿನೂತನ ಪ್ರತಿಭಟನೆ (Protest) ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಬಿಡುವುದನ್ನು ನಿಲ್ಲಿಸುವಲ್ಲಿ ಮಾತ್ರ ಯಶಸ್ಸು ಸಿಗಲಿಲ್ಲ. ಇಷ್ಟಾದ್ರೂ ರಾಜ್ಯದಲ್ಲಿ ಮಾತ್ರ ಕಾವೇರಿಯ ಕಾವು ಇನ್ನೂ ತಣ್ಣಗಾಗಿಲ್ಲ. ರಾಜ್ಯದ ರೈತರು ಅನುಭವಿಸುತ್ತಿರುವ ಸಮಸ್ಯೆ ಕುರಿತು ಗಮನಸೆಳೆಯುವ ಕಾರ್ಯ ನಡೆಯುತ್ತಲೆ ಇದೆ. ಈಗಾಗಲೇ ನಟರು, ಕನ್ನಡ ಪರ ಸಂಘಟನೆಗಳು ರಕ್ತದಲ್ಲಿ ಪತ್ರ (Blood Letter) ಬರೆದು ಪ್ರಧಾನಿ ಮೋದಿಯವರಿಗೆ ಕಳಿಸಿದ್ದಾರೆ. ಇದೇ ಮಾರ್ಗದಲ್ಲಿ ಸಾಗಿದ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ಯುವಕನೊಬ್ಬ ತನ್ನ ರಕ್ತದಿಂದ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದರ ಮೂಲಕ ಆದಷ್ಟು ಬೇಗ ನಮ್ಮ ರೈತರ ಮನವಿಗೆ ಸ್ಪಂದಿಸಬೇಕೆಂದು ಮನವಿ ಮಾಡಿದ್ಧಾನೆ.

ಇನ್ನೂ ಕಳೆದ ವಾರ ನಡೆದ ಕರ್ನಾಟಕ ಬಂದ್​ಗೆ ಉತ್ತರ ಕರ್ನಾಟಕ ಭಾಗದಲ್ಲಿ ಒಳ್ಳೆ ಸ್ಪಂದನೆ ಸಿಕ್ಕಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಆದೆಲ್ಲ ಮಾತುಗಳಿಗೆ ಫುಲ್ ಸ್ಟಾಪ್ ಇಟ್ಟಿರುವ ಪ್ರಕಾಶ್, ಉತ್ತರ ಕರ್ನಾಟಕ ಆಗಲಿ ದಕ್ಷಿಣ ಕರ್ನಾಟಕ ಆಗಲಿ ಎಲ್ಲ ರೈತರು ಒಂದೆ. ಇಂದು ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಅವರ ಕುಟುಂಬದ ಕಷ್ಟ ನಾನು ಕಂಡಿದ್ದೆನೆ. ಈ ಸಮಸ್ಯೆ ರಾಜ್ಯದ ಬೇರೆ ಯಾವ ರೈತ ಕುಟುಂಬಗಳಿಗೆ ಬಾರದಿರಲಿ ಎಂಬುವುದು ನನ್ನ ಕಳಕಳಿ ಎಂದು ತಿಳಿಸಿದ್ದಾನೆ.

ADSENSE CODE - 1

ADSENSE CODE - 1





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close