ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಉದ್ಘಾಟನೆweb news kannada
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಉದ್ಘಾಟನೆ webnews kannada
‘ ಬ್ರಹ್ಮಾವರ : ಇಂದಿನ ದಿನಗಳಲ್ಲಿ ಎಲ್ಲರಿಗೂ ಸರ್ಕಾರಿ ಉದ್ಯೋಗಗಳು ಸಿಗದೇ ಇರುವ ಸಮಯದಲ್ಲಿ ಸ್ವ ಉದ್ಯೋಗ ಒಂದು ಅತ್ಯುತ್ತಮ ವಾದ ಅವಕಾಶವಾಗಿರುತ್ತದೆ. ಇದಕ್ಕೆ ಅನೇಕ ಮಾಹಿತಿ-ಮಾರ್ಗದರ್ಶನ ಬೇಕಾದಷ್ಟು ಸಿಗುತ್ತದೆ ಅದರ ಸದುಪಯೋಗ ಮಾಡಿಕೊಳ್ಳಿ ಎಂದು ಕಲ್ಯಾಣಪುರ ಕೆನರಾ ಬ್ಯಾಂಕ್ ನ ಪ್ರಬಂಧಕರಾದ ಸುಧೀರ್ ಅಭಿಪ್ರಾಯ ಪಟ್ಟರು.

WEBNEWSKANNADA
WebNewsKannada |
Updated on: nov 17, 2023
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಸಿ ಮಾತನಾಡಿದರು. ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯಗಳನ್ನು ಹಾಗೂ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು.
ಕಲ್ಯಾಣಪುರ ಕೆನರಾ ಬ್ಯಾಂಕ್ ಅಧಿಕಾರಿಯಾದ ಶರತ್ ಅವರು ವೇದಿಕೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮೀಶ ಎ.ಜಿ ಮಾತನಾಡಿ ಈ ತರಬೇತಿಯಲ್ಲಿ ಕೇವಲ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಅಲ್ಲ ಅದರ ಜೊತೆಗೆ ಉದ್ಯಮಶೀಲತೆ ಅಭಿವೃದ್ಧಿ ಇರುತ್ತದೆ ಇದು ವ್ತಕ್ತಿಯಲ್ಲಿ ಮತ್ತು ಜೀವನದಲ್ಲಿ ಹೆಚ್ಚಿನ ಉಪಯೋಗವಾಗುತ್ತದೆ ಎಂದರು.
ಕಾರ್ಯಕ್ರಮದ ಅತಿಥಿಗಳನ್ನು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಸ್ವಾಗತಿಸಿ, ತರಬೇತಿಯ ಮುನ್ನೋಟ ವನ್ನು ನೀಡಿ, ನಿರೂಪಿಸಿದರು ಉಪನ್ಯಾಸಕರಾದ ಸಂತೋಷ ಶೆಟ್ಟಿ ವಂದಿಸಿದರು..

