Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ- webnews kannada

 

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ.

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್​ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ

https://www.webnewskannada.com/
WEBNEWS KANNADA
WebNewsKannada​ | 

Updated on: nov-15

, 2023


ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ (Udupi 4 Murder) ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆಯನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಉಡುಪಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಕಡಲ ಕಿನಾರೆಯಲ್ಲಿ ರಕ್ತದ ಕೊಡಿ ಹರಿಸಿದ ಹಂತಕನನ್ನ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸ್ತಿದ್ದಾರೆ. ಸದ್ಯ ಆರೋಪಿ ಈ ಹಿಂದೆ ಪೊಲೀಸ್ ಆಗಿ ಕೆಲಸ ಮಾಡಿದ್ದು ತಿಳಿದು ಬಂದಿದೆ. ಜೊತೆಗೆ ಕೊಲೆ ಹಿಂದಿನ ಅನೇಕ ಸಂಗತಿಗಳು ಬಯಲಾಗುತ್ತಿವೆ. ಅಜ್ಞಾತ ಸ್ಥಳದಲ್ಲಿ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ಇನ್ನು, ನಿನ್ನೆಯೇ ಹಂತಕ ಪ್ರವೀಣ್ ಚೌಗಲೆಯನ್ನ ಬಂಧಿಸಿದ್ದ ಪೊಲೀಸರು, ಇವತ್ತು ಬೆಳಗ್ಗೆ 4 ಗಂಟೆಗೆ ಉಡುಪಿಗೆ ಕರೆತಂದಿದ್ದಾರೆ. ಅಜ್ಞಾತ ಸ್ಥಳದಲ್ಲಿ ಆರೋಪಿ ಪ್ರವೀಣ್​​ನನ್ನ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಹಂತಕನನ್ನ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಹಂತಕ ಮಾಜಿ ಪೊಲೀಸ್ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್​ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಒಬ್ಬಳ ಮೇಲಿನ ದ್ವೇಷ-ನಾಲ್ವರ ಬಲಿ ಪಡೆದ ಹಂತಕ ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ಸಿಬ್ಬಂದಿಯಾಗಿದ್ದ ಹಂತಕ ಪ್ರವೀಣ್ ಹತ್ಯೆಯಾದ ಅಯ್ನಾಜ್ ಸಹೋದ್ಯೋಗಿಯಾಗಿದ್ದ. ಅಯ್ನಾಜ್ ಮತ್ತು ಪ್ರವೀಣ್ ಗೆ ಹಲವು ವರ್ಷಗಳ ಪರಿಚಯವಿತ್ತು. ಭಾನುವಾರ ಮುಂಜಾನೆ ಮಂಗಳೂರಿನಿಂದ ಉಡುಪಿಗೆ ಬಂದು. ಅಯ್ನಾಜ್ ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾಗ ಮನೆಗೆ ನುಗ್ಗಿದ ಕೊಲೆ ಮಾಡಿದ್ದಾನೆ. ಅಯ್ನಾಜ್ ಮೃತ ಹಸೀನಾಳ ಎರಡನೇ ಮಗಳು. ಮೊದಲಿಗೆ ಹಂತಕ ಅಯ್ನಾಜ್ ಕೊಲೆ ಮಾಡಿ ಬಳಿಕ ಉಳಿದ ಮೂವರ ಹತ್ಯೆ ಮಾಡಿದ್ದಾನೆ. ಆ ಕ್ಷಣದಲ್ಲೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಇತ್ತ ತನಿಖೆ ಆರಂಭಿಸಿದ್ದ ಉಡುಪಿ ಪೊಲೀಸರು ಅಯ್ನಾಜ್ ಸಹೋದ್ಯೋಗಿಗಳ ಪೈಕಿ ಪ್ರವೀಣ್ ಮೊಬೈಲ್ ಮಾತ್ರ ಸ್ವಿಚ್ ಆಫ್ ಆಗಿದ್ದನ್ನು ಗಮನಿಸಿ ಪ್ರವೀಣ್ ಬಗ್ಗೆಯೇ ಜಾಸ್ತಿ ಗಮನ ಹರಿಸಿದ್ರು. ಮಂಗಳವಾರ ಮಧ್ಯಾಹ್ನ ಪ್ರವೀಣ್ ಮೊಬೈಲ್ ಆನ್ ಮಾಡುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆಗೆ ಸಹಾಯವಾಗಿದ್ದು ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ನರಹಂತಕ ಪ್ರವೀಣ್ ಲಾಕ್ ಆಗಿದ್ದಾನೆ.  

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close