Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಗಳನ್ನ ಹೊತ್ತೊಯ್ದಿದಲ್ಲದೆ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​ webnews kannada

 

ಮಗಳನ್ನ ಹೊತ್ತೊಯ್ದಿದಲ್ಲದೆ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​ webnews kannada

ಬೆಂಗಳೂರು, ನವೆಂಬರ್ 21: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ (mother in law) ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು (Son in law) ಪೊಲೀಸರು (halasuru police) ಬಂಧಿಸಿದ್ದಾರೆ.

https://www.webnewskannada.com/
WEBNEWSKANNADA
WebNewsKannada​ | 

Updated on: nov 21, 2023


ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಹೋಗುವಾಗ ಅಕ್ಕಪಕ್ಕದ ನಿವಾಸಿಗಳು ನೋಡಿದ್ದರು. ಪ್ರಶ್ನೆ ಮಾಡಿದಾಗ ನಾನು ಅವರ ಸಂಬಂಧಿಕ ಎಂದು ಹೇಳಿದ್ದ.ಆದ್ರೆ ಸ್ಥಳೀಯರು ಚಾಣಾಕ್ಷತನ ತೋರಿ, ಚಿನ್ನಾಭರಣ ತೆಗೆದುಕೊಂಡು ಹೋಗುತ್ತಿದ್ದ ಪ್ರದೀಪ್ ಕುಮಾರನ ಫೊಟೋವನ್ನು ಮೊಬೈಲ್ ನಲ್ಲಿ ಕರೆ ಹಿಡಿದಿದ್ದಾರೆ. ಜೊತೆಗೆ ರೆಜಿನಾ ಅವರಿಗೆ ಕರೆ ಮಾಡಿ, ಹೀಗೆಲ್ಲಾ ಆಗಿದೆ ಎಂದು ಫೋಟೋ ಸಮೇತ ಮಾಹಿತಿ ನೀಡಲು ಯತ್ನಿಸಿದ್ದರು. ಆದರೆ ರೆಜಿನಾ ಅವರ ನಂಬರ್ ನಾಟ್ ರೀಚಬಲ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ. ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರೋದಾಗಿ ರೆಜಿನಾಗೆ ತಿಳಿಸಿದ್ದಾರೆ.ಫೊಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನ ಪ್ರೀತಿಸಿ ಕರೆದುಕೊಂಡು ಹೋಗಿದ್ದ ಪ್ರದೀಪ್. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ತಿಳಿಸಿಲ್ಲವಂತೆ. ಈ ಸಂಬಂಧ ತನ್ನ ಅಳಿಯನ ವಿರುದ್ಧವೇ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close