ನಾಯಿ ಬೊಗಳಿದ್ದಕ್ಕೆ ಪಕ್ಕದ ಮನೆಯವರ ಮೇಲೆ ಆ್ಯಸಿಡ್ ಎರಚಿದ ದಂಪತಿ -webnews kannada
ನಾಯಿ ಬೊಗಳಿದ್ದಕ್ಕೆ ಪಕ್ಕದ ಮನೆಯವರ ಮೇಲೆ ಆ್ಯಸಿಡ್ ಎರಚಿದ ದಂಪತಿ
ಶಿವಮೊಗ್ಗ, ಡಿಸೆಂಬರ್ 04: ನಾಯಿ (dog) ಬೊಗಳುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಕ್ಕದ ಮನೆ ವ್ಯಕ್ತಿ ಮೇಲೆ ದಂಪತಿ ಆ್ಯಸಿಡ್ ಎರಚಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ. ಜೇಮ್ಸ್, ಮರಿಯಮ್ಮರಿಂದ ಸುಂದರ್ ರಾಜ್ ಮೇಲೆ ಆ್ಯಸಿಡ್ ದಾಳಿ ಮಾಡಿದ್ದು, ಸುಂದರ್ರಾಜ್ ಕಣ್ಣು, ಮುಖಕ್ಕೆ ಗಾಯಗಳಾಗಿವೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದಾರೆ.

WEBNEWSKANNADA
WebNewsKannada |
Updated on: nov 04, 2023
ಸಾಕು ನಾಯಿ ಬೊಗಳಿದ್ದಕ್ಕೆ ಗಾಯಾಳು ಸುಂದರ್ ರಾಜ್ ಬೈಯ್ದಿದ್ದ. ನಾಯಿ ಹೆಸರಿನಲ್ಲಿ ಜೇಮ್ಸ್, ಮರಿಯಮ್ಮಗೆ ಬೈಯ್ಯುತ್ತಿದ್ದ ಎಂದು ಆರೋಪ ಮಾಡಲಾಗಿದೆ. ಸಿಟ್ಟಿಗೆದ್ದು ಸುಂದರಾಜ್ ಮೇಲೆ ದಂಪತಿ ಆ್ಯಸಿಡ್ ದಾಳಿ ಮಾಡಿದ್ದಾರೆ. ಸದ್ಯ ದಂಪತಿ ವಿರುದ್ಧ ಎನ್.ಆರ್.ಪುರ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಜೇಮ್ಸ್, ಮರಿಯಮ್ಮ ದಂಪತಿ ನಾಪತ್ತೆ ಆಗಿದ್ದಾರೆ..

