ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ-webnews kannada
ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ-webnews kannada
ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆಯು ಇತ್ತೀಚೆಗೆ ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

WEBNEWSKANNADA
WebNewsKannada |
Updated on: nov 16, 2023
ಪಂಚಾಯತ್ ಸದಸ್ಯರು ಹಾಗೂ ವಕೀಲರಾದ ಹೆಚ್ ಪ್ರಮೋದ ಹಂದೆ ಅವರು ಕಾನೂನು ಮಾಹಿತಿ ನೀಡಿದರು ಹಾಗೂ "ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಂವಿಧಾನದ ಆಶಯದಂತೆ ಸಾಮಾಜಿಕ, ಆರ್ಥಿಕವಾಗಿ
ಸಾಮರಸ್ಯ ಅಡಿಯಲ್ಲಿ ಜೀವನ ಸಾಗಿಸಬೇಕು, ಯಾವುದೇ ಕೀಳರಿಮೆ ಇಲ್ಲದೆ ಇತರ ಸಮುದಾಯದಂತೆ ಮುಂದೆ ಬರಬೇಕು" ಎಂದು ಹೇಳಿದರು. ಅಧ್ಯಕ್ಷರಾದ ಕೆ ಸತೀಶ್
ಕುಂದರ್ ಬಾರಿಕೆರೆ ಅವರು "ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ತಿಳಿಸುವಂತೆ ಮನವಿ ಮಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬುಟ್ಟಿ ನೇಯ್ಗೆ,
ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಸಹಾಯದ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ. ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಮೋದ್ ಹಂದೆ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ಶ್ರೀಮತಿ ವಿದ್ಯಾ ಪಿ, ಶ್ರೀಮತಿ. ಜ್ಯೋತಿ, ಶ್ರೀಮತಿ ಅಶ್ವಿನಿ, ಶ್ರೀಮತಿ ಸೀತಾ,ಸಮಾಜ ಕಲ್ಯಾಣ ಇಲಾಖೆಯ ಗುರು ರಾವ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು, ಸಾರ್ವಜನಿಕರು, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸದಸ್ಯರಾದ ವಾಸು ಪೂಜಾರಿ ಅವರು ಸ್ವಾಗತಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್ ಅವರು ನಿರೂಪಿಸಿದರು ಹಾಗೂ ಕಾರ್ಯದರ್ಶಿ ಸುಮತಿ ಅಂಚನ್ ಅವರು ವಂದಿಸಿದರು.





