Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಗಿಳಿಯಾರು: ಹೊಳೆ ಹೂಳೆತ್ತುವಂತೆ ಆಗ್ರಹಿಸಿ ಸಭೆ; webnewskannada

 




ಕೋಟ ಗಿಳಿಯಾರು: ಹೊಳೆ ಹೂಳೆತ್ತುವಂತೆ ಆಗ್ರಹಿಸಿ ಸಭೆ; ಹೋರಾಟದ ರೂಪುರೇಷೆ ಕೋಟ

ಜು.೨೧: ಕೋಟ ಗ್ರಾ.ಪಂ. ವ್ಯಾಪ್ತಿಯ ಮೂಡುಗಿಳಿಯಾರು, ಹರ್ತಟ್ಟು ದೇವಸ ಸೇರಿದಂತೆ, ಚಿತ್ರಪಾಡಿ ಬೆಟ್ಟಕ್ಕಿ ತನಕ ಸುಮಾರು ೫೦೦ ಎಕ್ರೆಗೂ ಹೆಚ್ಚು ಪ್ರದೇಶದಲ್ಲಿ ನೆರೆ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಹೋರಾಟ ರೂಪಿಸುವ ಸಲುವಾಗಿ ಸ್ಥಳೀಯ ಜನಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟ ಮಾಂಗಲ್ಯ ಮಂದಿರದಲ್ಲಿ ಜು.೨೧ರಂದು ಸ್ಥಳೀಯ ರೈತರ ಸಭೆ ನಡೆಯಿತು. ನಮ್ಮ ಭತ್ತದ ಬೆಳೆ ಪ್ರತಿ ವರ್ಷ ನೆರೆ ಹಾವಳಿಯಿಂದ ಹಾನಿಗೀಡಾಗುತ್ತದೆ. ಹೊಳೆಯ ಹೂಳೆತ್ತಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆಗೊಳಿಸಿದರೆ ಸಮಸ್ಯೆ ಬಹುತೇಕ ಪರಿಹಾರವಾಗಲಿದೆ.ಆದರೆ ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎಂದು ಸ್ಥಳೀಯ ಕೃಷಿಕರು ಬೇಸರ ವ್ಯಕ್ತಪಡಿಸಿದರು. ಸಮಸ್ಯೆ ಪರಿಹಾರಕ್ಕೆ ಹೋರಾಟವೊಂದೇ ಪರಿಹಾರ ಮಾರ್ಗವಾಗಿದೆ. ಆದ್ದರಿಂದ ಈ ಬಗ್ಗೆ ಜನಸೇವಾ ಟ್ರಸ್ಟ್ ನೇತೃತ್ವದಲ್ಲೇ ಹೋರಾಟದ ರೂಪುರೇಷೆ ಹಾಕಿಕೊಳ್ಳುವ ಎಂದು ರೈತರು ತಿಳಿಸಿದರು. ಪ್ರತಿಭಟನೆ, ರಸ್ತೆ ತಡೆ :- ಆರಂಭದಲ್ಲಿ ಶಾಸಕರಿಗೆ ಮನವಿ ನೀಡಿ ಹೊಳೆಯ ಸರ್ವೆ ನಡೆಸಿ, ಅಭಿವೃದ್ಧಿಗೊಳಿಸಲು ತಿಳಿಸುವುದು ಹಾಗೂ ಇದಕ್ಕೆ  ನಿರ್ದಿಷ್ಟ  ಕಾಲಾವಕಾಶ ನೀಡುವುದು. ನಿರ್ದಿಷ್ಟ ಸಮಯದಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ, ರಸ್ತೆ ತಡೆ ನಡೆಸುವುದು ಎನ್ನುವ ತೀರ್ಮಾನಕ್ಕೆ ಬರಲಾಯಿತು. ಜನಸೇವಾ ಟ್ರಸ್ಟ್‌ನ ವಸಂತ್ ಗಿಳಿಯಾರು, ದಿನೇಶ್ ಶೆಟ್ಟಿ, ಅಶೊಕ್ ಶೆಟ್ಟಿ, ಸಫಲ್‌ಶೆಟ್ಟಿ, ಅರುಣ್ ಶೆಟ್ಟಿ, ನಿಖಿಲ್ ನಾಯಕ್, ಮೊದಲಾದವರಿದ್ದರು. ರೈತರ ಪರವಾಗಿ ಭರತ್ ಕುಮಾರ್ ಶೆಟ್ಟಿ, ಶ್ಯಾಮ್‌ಸುಂದರ್ ನಾರಿ, ರಾಘವೇಂದ್ರ ಶೆಟ್ಟಿ, ಮಹೇಶ್ ಶೆಟ್ಟಿ, ಟಿ.ಮಂಜುನಾಥ, ಸುಭಾಶ್ ಶೆಟ್ಟಿ, ಮಹಾಬಲ ಹೇರ್ಳೆ, ಕೆದೂರು ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ರಾಘವೇಂದ್ರ ಪೂಜಾರಿ ಹೊಳೆಕಟ್ಟು, ಯೋಗಾನಂದ ಹೆಗ್ಡೆ, ವಿಜಯ ಗಿಳಿಯಾರು, ಸೂರ್‍ಯ ಶೆಟ್ಟಿ, ಅಜಿತ್ ದೇವಾಡಿಗ, ಕೋಟ ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ಇದ್ದರು. 





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close