Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಂತೆಗುಡ್ಡೆ ಬಾರ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಸಂತೆಗುಡ್ಡೆ ಬಾರ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

webNews

ಸಂತೆಗುಡ್ಡೆ ಬಾರ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು SDMC ಅಧ್ಯಕ್ಷರಾದ ಶ್ರೀಮತಿ ಸುನಿತಾ ಜಿ ಅವರು ನೆರವೇರಿಸಿದರು,

ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ ಶಾಂತರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ ಆರ್.ಕಾಮತ್,

ಕೂಸ ಎಲ್ ಕುಂದರ್, ಹೊಸ್ಕೆರೆ ಬಾರ್ಕೂರು, ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷರಾದ ಬಿ.ಗಣೇಶ ಶೆಟ್ಟಿ,ರೋ, ರತ್ನಾಕರ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿಗಳು S.D.M.C ಸದಸ್ಯರು ಶಾಲಾ ಹಳೆ ವಿದ್ಯಾರ್ಥಿಗಳು ,

ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು ಶಾಲಾ ಮುಖ್ಯಶಿಕ್ಷಕಿ ಶಾರದ ಕುಮಾರಿಯವರು ಅತಿಥಿಗಳನ್ನು ಸ್ವಾಗತಿಸಿದರು, ಸಹಶಿಕ್ಷಕಿ ಶೋಭಾರವರು ಸಿಹಿ ತಿಂಡಿ ನೀಡಿದವರ ಹೆಸರನ್ನು ವಾಚಿಸಿದರು, ಧನ್ಯವಾದ ಸಮರ್ಪಣೆಯೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಮುಕ್ತಾಯಗೊಂಡಿತು ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು S.D.M.C ಅಧ್ಯಕ್ಷರಾದ ಶ್ರೀಮತಿ ಸುನಿತಾ ರವರು ವಹಿಸಿದ್ದರು ಹಾಗೂ ಹಳೆ ವಿದ್ಯಾರ್ಥಿ ಶಿವ.ಟಿ ಪೂಜಾರಿ ಬೆಣ್ಣೆಕುದ್ರು, ,

ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷರಾದ ಬಿ.ಗಣೇಶ ಶೆಟ್ಟಿ, ನಿವೃತ್ತ ಸೈನಿಕರಾದ ಶ್ರೀರಾಮ ಪೂಜಾರಿ, ಶಿಕ್ಷಣ ಇಲಾಖೆಯಿಂದ ಕ್ಲಸ್ಟರ್ ನ C.R.P ಯಾದ ಶ್ರೀಮತಿ ಲಲಿತಾ,ಮುಖ್ಯ ಶಿಕ್ಷಕಿ ಶಾರದ ಕುಮಾರಿ,ಪಂಚಾಯತ್ ಸದಸ್ಯರಾದ ಕೂಸ ಎಲ್ ಕುಂದರ್ ಹೊಸ್ಕೆರೆ

ಉಪಸ್ಥಿತರಿದ್ದರು ಮುಖ್ಯ ಶಿಕ್ಷಕಿವರಾದ ಶಾರದ ಕುಮಾರಿ ಅವರು ಅತಿಥಿ ಗಳಿಗೆ ಪುಷ್ಪ ನೀಡಿ ಸ್ವಾಗತಿಸಿ ಸ್ವಾತಂತ್ರ್ಯೋತ್ಸವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು ಇದೇ ಸಂದರ್ಭದಲ್ಲಿ ದಾನಿಗಳಾದ ಟಿ ಶಿವ ಪೂಜಾರಿ ಬೆಣ್ಣೆಕುದ್ರು ಅವರನ್ನು ಅಭಿನಂದಿಸಿ ಗೌರವಿಸಲಾಯಿತು ಶಾಲೆಯನ್ನು ಉದ್ದೇಶಿಸಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷರಾದ ಬಿ ಗಣೇಶ್ ಶೆಟ್ಟಿ, C.R. ಶ್ರೀಮತಿ ಲಲಿತಾ,ಅವರು ತಮ್ಮ ಅನಿಸಿಕೆಗಳನ್ನು ತಿಳಿಸಿದರು, ಸನ್ಮಾನಗೊಂಡ ಶಿವ. ಟಿ ಪೂಜಾರಿ ಬೆಣ್ಣೆಕುದ್ರು ಹಾಗೂ S.D.M.C ಅಧ್ಯಕ್ಷರು ಕೂಡ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಗುಲಾಬಿ ಅವರು ಧನ್ಯವಾದ ಸಮರ್ಪಿಸಿದರು


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close