Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ತಾಲೂಕು ಗ್ರಾಮ ಒನ್ ವತಿಯಿಂದ 78ನೇ ಸ್ವಾತಂತ್ರೋತ್ಸವದ ವಿಭಿನ್ನ ಆಚರಣೆ

ಬ್ರಹ್ಮಾವರ ತಾಲೂಕು ಗ್ರಾಮ ಒನ್ ವತಿಯಿಂದ 78ನೇ ಸ್ವಾತಂತ್ರೋತ್ಸವದ ವಿಭಿನ್ನ ಆಚರಣೆ

webNews

ಬ್ರಹ್ಮಾವರ ತಾಲೂಕು ಗ್ರಾಮ ಒನ್ ವತಿಯಿಂದ 78ನೇ ಸ್ವಾತಂತ್ರೋತ್ಸವ ವನ್ನು ವಿಭಿನ್ನವಾಗಿ ಆಚರಿಸಲಾಯಿತು. ೭೮ನೇ ಸ್ವಾತಂತ್ರೋತ್ಸವದ ಅಂಗವಾಗಿ , ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳು , ಬ್ರಹ್ಮಾವರ ತಾಲೂಕು ಇವರ ವತಿಯಿಂದ, ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕದ ಗೌರವಕ್ಕೆ ಭಾಜನರಾದ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀ ಮಧು ಬಿ. ವಿ ಇವರನ್ನು ಪೊಲೀಸ್ ಠಾಣೆಯ ಅವರ ಕಚೇರಿಯಲ್ಲಿ ಭೇಟಿ ಮಾಡಿ ಗೌರವಿಸಲಾಯಿತು. ಹಾಗೂ ಸ್ಪಂದನ ದಿವ್ಯಾಂಗರ ತರಬೇತಿ ಮತ್ತು ಸಂರಕ್ಷಣಾ ಸಂಸ್ಥೆ , ನೇಜಾರು, ಸಂತೆಕಟ್ಟೆ , ಉಡುಪಿ ಇಲ್ಲಿಗೆ ಭೇಟಿ ಕೊಟ್ಟು, ಸಂಸ್ಥೆಯ ಮುಖ್ಯಸ್ಥರ ಸೇವೆಗಾಗಿ ಗೌರವ ಸಮರ್ಪಣೆಗಳನ್ನು ನೀಡಿ ಗೌರವಿಸಲಾಯಿತು. ದಿವ್ಯಾಂಗ ವಿಶೇಷ ಚೇತನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಮತ್ತು UDID ಕಾರ್ಡ್ ಮಾಡಿ ಕೊಡುವ ಪಕ್ರಿಯೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜಶೇಖರ್ ಬೈಕಾಡಿ, ಮಮತಾ ರಾಜಶೇಖರ್, ನಂದಿನಿ ಕೊಕ್ಕರ್ಣೆ , ಶಾಂತಿ ಗೋಳಿಯಂಗಡಿ, ಚಂದ್ರ ಯೆಡ್ತಾಡಿ, ಆನಂದ್ ಸೈಬ್ರಕಟ್ಟೆ, ಧನಲಕ್ಷ್ಮಿ ಆನಂದ್, ಅಶ್ವಿನಿ ಕೋಟಾರಿ , ನಂದಕಿಶೋರ್ ವಾರಂಬಳ್ಳಿ, ವಿದ್ಯಾ ನಂದಕಿಶೋರ್ ಮತ್ತಿತರರು ಉಪಸ್ಥಿತರಿದ್ದರು..


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close