Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬಾರಕೂರು ದೀಪಕ್ ಶೆಟ್ಟಿ ಅವರಿಗೆ ಪಿ.ಎಚ್‌ಡಿ


ಬಾರಕೂರು ದೀಪಕ್ ಶೆಟ್ಟಿ ಅವರಿಗೆ ಪಿ.ಎಚ್‌ಡಿ

webNews

ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗತಿಗಳ ಮೌಲ್ಯೀಕರಣ: ಬಾರಕೂರು ದೀಪಕ್ ಶೆಟ್ಟಿ ಅವರಿಗೆ ಪಿ.ಎಚ್‌ಡಿ ವಿದ್ಯಾಭ್ಯಾಸ ಮೆಕ್ಯಾನಿಕಲ್ ಎಂಜಿನಿಯರಿಂಗ್, ವೃತ್ತಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಟೊಯೊಟಾ ಕಂಪನೆಯಲ್ಲಿ ಡೆಪ್ಯುಟಿ ಜನರಲ್ ಮೆನೆಜರ್. ಆದರೆ ತುಡಿತ ಕರಾವಳಿಯ ಗಂಡು ಕಲೆ ಖ್ಯಾತಿಯ ಯಕ್ಷಗಾನದಲ್ಲಿ ಸುಸ್ಥಿರತೆ. ಇದಕ್ಕಾಗಿ ವಿಭಿನ್ನ

ರೀತಿಯಲ್ಲಿ ಪ್ರಯತ್ನಿಸುತ್ತಿರುವವರು ಬಾರಕೂರು ದೀಪಕ್ ಶೆಟ್ಟಿ. ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗತಿಗಳ ಮೌಲ್ಯೀಕರಣ ಎನ್ನುವ ವಿಷಯದ ಕುರಿತು ಇವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ. ಪಿ.ಎಚ್‌ಡಿ ಪದವಿ ನೀಡಿದೆ. ಇದಕ್ಕಾಗಿ ಯಕ್ಷಗಾನದ ಇತಿಹಾಸ, ಪೌರಾಣಿಕೆ ಹಿನ್ನಲೆ, ರೂಪಾಂತರವನ್ನು ಅಭ್ಯಸಿಸಿ ಪ್ರಬಂಧದಲ್ಲಿ ಮಂಡಿಸಿದ್ದಾರೆ. ಹತ್ತಾರು ಹಿರಿಯ ಕಲಾವಿದರನ್ನು ಸಂದರ್ಶಿಸಿ, ಕ್ಷೇತ್ರದಲ್ಲಿ ಆಳವಾದ ಅಧ್ಯಯನ ನಡೆಸಿದ್ದಾರೆ. ಸುಮಾರು 3 ತಲೆಮಾರಿನ ಅನುಭವವನ್ನು ಸಂಗ್ರಹಿಸಿದ್ದಾರೆ. ಮುಖ್ಯ ಉದ್ದೇಶ: ಆರ್ಥಿಕವಾಗಿ ಸದೃಢವಿದ್ದಾಗ ಕಲಾವಿದರು ಉಳಿಯುತ್ತಾರೆ, ಕಲಾ ಪ್ರಕಾರ ಉಳಿಯುತ್ತದೆ. ಯಕ್ಷಗಾನ ಕ್ಷೇತ್ರದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವ ಮುಖ್ಯ ಉದ್ದೇಶದಿಂದ ವಿಚಾರ ಮಂಡಿಸಿದ್ದಾರೆ. ಈ ಸುಸ್ಥಿರತೆಯಲ್ಲಿ ಕಲಾವಿದರು, ಮೇಳದ ಯಜಮಾನರು, ಸಂಘಟಕರು, ಪ್ರೇಕ್ಷಕರು ಹಾಗೂ ಪ್ರಾಮುಖ್ಯವಾಗಿ ಸರಕಾರದ ಪಾತ್ರವನ್ನು ಒತ್ತಿ ಹೇಳಿದ್ದಾರೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close