ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ
ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ
ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಅಂದರೆ ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. .
ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ ಮಾರ್ಗಸೂಚಿಗಳು ಹೀಗಿವೆ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು. ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರ್ದು. ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಡಿ. ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತನ್ನಿ. ತುಂಡಾದ ವೈರ್, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ವಿದ್ಯುತ್ ಪರಿಕರಗಳಿರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್’ ಎಂದು ಸೂಚಿಸಬೇಕು ಅಂತಾ ಬೆಸ್ಕಾಂ ಹೇಳಿದೆ. :
%20(13).jpeg)
