Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಯುವಕನ ಶವ ಪತ್ತೆ ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ಯುವಕನ ಶವ ಪತ್ತೆ  ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ವಿಜಯಪುರ, ನವೆಂಬರ್​ 11: ನಿನ್ನೆ ಬಸವನಬಾಗೇವಾಡಿ ಪಟ್ಟಣದ ಹೊರ ಭಾಗದಲ್ಲಿ ಯುವಕನೋರ್ವನ ಶವ ಪತ್ತೆಯಾಗಿತ್ತು ಶವದ ಮೇಲೆ ಯಾವುದೇ ಗಾಯದ ಗುರುತೂ ಸಹ ಆಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಬಸವನಬಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿ ಸುನೀಲ್ ಭಜಂತ್ರಿ ಎಂದು ಮೃತ ಯುವಕನ ಗುರುತು ಪತ್ತೆ ಹಚ್ಚಿದ್ದರು. ಸದ್ಯ ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿರೋವಾಗಲೇ ಆಘಾತಕಾರಿ ವಿಡಿಯೋಗಳು ಪತ್ತೆಯಾಗಿದ್ದು, ಬಿಗ್ ಟ್ವಿಸ್ಟ್​ ಸಿಕ್ಕಿದೆ. ನನ್ನ ಮಗನ ಕೊಲೆಗೆ ಸಂತೋಷ ಉಕ್ಕಲಿ, ಓಗಪ್ಪ ಉರ್ಪ್ ಮುದಕಪ್ಪಾ ಒಡೆಯರ್, ಬಸವರಾಜ ಉಕ್ಕಲಿ ಹಾಗೂ ಓರ್ವ ಮಹಿಳೆ ಕಾರಣ. ಓರ್ವ ಮಹಿಳೆಯೊಂದಿಗೆ ನನ್ನ ಮಗ ಪ್ರೀತಿ-ಪ್ರೇಮ ಎಂದು ಓಡಾಡಿಕೊಂಡಿದ್ದ. ಈ ವಿಚಾರವಾಗಿ ನಾವು ಆತನಿಗೆ ಬುದ್ದಿ ಮಾತು ಹೇಳಿದ್ದೇವು. ಇದೇ ಮಹಿಳೆ ಜೊತೆಗೆ ಸಂತೋಷ ಉಕ್ಕಲಿಯ ಸಂಬಂಧವೂ ಇತ್ತು. ನನ್ನ ಮಗನ ಸಾವಿನ ಹಿಂದೆ ಇದೇ ಕಾರಣವಿದೆ ಎಂದು ದೂರು ನೀಡಿದ್ದರು.

ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಹೊರ ಭಾಗದ ಜಮೀನನಲ್ಲಿ ನಿನ್ನೆ ಯುವಕನ ಶವ ಪತ್ತೆಯಾಗಿತ್ತು. ಬಸವನಬಾಗೇವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದರು. ಶವವಾಗಿ ಪತ್ತೆಯಾದವವನ್ನು ಪಟ್ಟಣದ ವಾಸಿ ಸುನೀಲ್ ಭಜಂತ್ರಿ (21) ಎಂದು ತಿಳಿದುಬಂದಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದಿದ್ದ ಸುನೀಲ್ ಪೋಷಕರು ಕಣ್ಣೀರು ಹರಿಸಿದ್ದರು. ನನ್ನ ಮಗನನ್ನು ಕೊಲೆ ಮಾಡಿದ್ಧಾರೆಂದು ಆರೋಪ ಮಾಡಿದ್ದರು.

ಇದರ ಮಧ್ಯೆ ಸುನೀಲ್ ಭಜಂತ್ರಿ ಕತ್ತಿಗೆ ಹಗ್ಗ ಹಾಕಿರುವ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದರು. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ಪರೀಕ್ಷೆ ನಡೆಸಿ ತನಿಖೆ ಮಾಡಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶಂಕರ ಮಾರೀಹಾಳ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆ ಮಾಡಿದ್ದರು. ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದರು. ಈ ಕುರಿತು ತನಿಖೆ ನಡೆಸಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close