Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋವಿ ಹಿಡಿದು ಕುದುರೆಮುಖ ಅರಣ್ಯ ಅಕ್ರಮ ಪ್ರವೇಶ ಮೂವರ ಬಂಧನ

ಕೋವಿ ಹಿಡಿದು ಕುದುರೆಮುಖ ಅರಣ್ಯ ಅಕ್ರಮ ಪ್ರವೇಶ ಮೂವರ ಬಂಧನ

ಸಾಂದರ್ಭಿಕ ಚಿತ್ರ

ಅಜೆಕಾರು: ಬೇಟೆಯಾಡುವ ಉದ್ದೇಶದಿಂದ ಕೋವಿ ಹಿಡಿದು ಕುದುರೆಮುಖ ಮೀಸಲು ಅರಣ್ಯ ಅಕ್ರಮ ಪ್ರವೇಶ ಮಾಡಿದ ಆರೋಪದಡಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ದಿನಾಂಕ 30/10/2024 ರಂದು ಅಭಿಲಾಷ್ ಎಸ್.ಬಿ, ಉಪ ವಲಯ ಅರಣ್ಯ ಅಧಿಕಾರಿ, ಅಂಡಾರು ವನ್ಯಜೀವಿ ಘಟಕ (ಹೆ.ಪ್ರ.), ಕಾರ್ಕಳ ವನ್ಯಜೀವಿ ವಲಯ, ಕಾರ್ಕಳ ಇವರು ಇಲಾಖಾ ಮೇಲಾಧಿಕಾರಿ ಹಾಗೂ ಅಧೀನ ಸಿಬ್ಬಂದಿಯವರೊಂದಿಗೆ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿರುವಾಗ ದಿನಾಂಕ 31/10/2024ರ ಮುಂಜಾನೆ ವೇಳೆಗೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ನಡ್ವಾಲು ಎಂಬಲ್ಲಿ ಆರೋಪಿಗಳು ಅಕ್ರಮವಾಗಿ ಬೇಟೆಯಾಡುವ ಉದ್ದೇಶದಿಂದ ನಾಡಕೋವಿಯನ್ನು ಇಟ್ಟುಕೊಂಡು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೀಸಲು ಅರಣ್ಯದ ಒಳಗಡೆ ಪ್ರವೇಶಿಸಿದ್ದು, ಆರೋಪಿಗಳ ಪೈಕಿ 1] ವಸಂತ, 2] ಜಯ, 3] ರಾಕೇಶ್ ಇವರನ್ನು ದಸ್ತಗಿರಿ ಮಾಡಿದ್ದಾರೆ. ಸಂತೋಷ್ ಓಡಿ ಹೊಗಿದ್ದು ತಲೆ ಮರೆಸಿಕೊಂಡಿರುತ್ತಾನೆ.ಬಂಧಿತ ಆಪಾದಿತರನ್ನು ಮಾನ್ಯ ನ್ಯಾಯಾಧೀಶರ ಆದೇಶದನ್ವಯ ದಿನಾಂಕ 31/10/2024 ರಂದು ಜಿಲ್ಲಾ ಕಾರಾಗೃಹ, ಹಿರಿಯಡ್ಕ, ಉಡುಪಿ ಜಿಲ್ಲೆ. ಇವರ ಅಧೀನಕ್ಕೆ ನೀಡಲಾಗಿರುತ್ತದೆ. ಈ ಬಗ್ಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕಾಗಿರುವುದರಿಂದ ಅರಣ್ಯ ಇಲಾಖೆಯಲ್ಲಿ ಸಮರ್ಥ ಅಧಿಕಾರ ಹೊಂದದೇ ಇರುವ ಕಾರಣ ಮಾನ್ಯ ಹೆಚ್ಚುವರಿ ಸಿವಿಲ್ ಜಡ್ಜ್ & ಜೆ.ಎಮ್.ಎಫ್.ಸಿ ಕಾರ್ಕಳ ರವರ ಅನುಮತಿ ಪಡೆದು ಮಾನ್ಯ ನ್ಯಾಯಾಲಯದ ಆದೇಶದಂತೆ ವಶಪಡಿಸಿಕೊಂಡ ಸೊತ್ತುಗಳೊಂದಿಗೆ ಠಾಣೆಗೆ ಹಾಜರಾಗಿ ದೂರು ನೀಡಿರುವುದಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 39/2024ಕಲಂ ಕಲಂ: 3, 25 Indian Arms Act 1959 & Sec 4 Explosive Substances Act 1908 ರಂತೆ ಪ್ರಕರಣ ದಾಖಲಾಗಿರುತ್ತದೆ:

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close