ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ಹಾವಿನ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿದ್ದಾನೆ. ಈ ಘಟನೆ ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದಿದೆ. ನಾಗರ ಹಾವಿನ ವಿಗ್ರಹವನ್ನು ಚರಂಡಿಗೆ ಎಸೆದಿದ್ದಲ್ಲದೆ, ಗಣೇಶ ಮೂರ್ತಿಗೆ ಒದ್ದು ಅವಮಾನ ಮಾಡಿರುವ ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್‌ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.