ಸದಾ ವಿವಾದಗಳಲ್ಲಿ ಸಿಲುಕಿಕೊಂಡಿರುವ ನಿತ್ಯಾನಂದ ಸ್ವಾಮಿ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ, ನಿತ್ಯಾನಂದ ತಂಡದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಅವರ ವಿರುದ್ಧದ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುವ ಇದು ಒಂದು ತಂತ್ರವಾಗಿರಬಹುದು ಎಂದೂ ಕೆಲವು ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಇತ್ತೀಚೆಗೆ, ಅವರ ಆರೋಗ್ಯ ಹದಗೆಟ್ಟ ಬಗ್ಗೆ ವರದಿಗಳು ಹೊರಬಂದಿದ್ದವು. ವಾಸ್ತವ ಸ್ಥಿತಿ ಏನೆಂಬುದನ್ನು ಇನ್ನೂ ದೃಢೀಕರಿಸಬೇಕಿದೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.