Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

(Blood bank)ಬ್ಲಡ್ ಬ್ಯಾಂಕ್​ಗಳಿಗೆ ಬರುತ್ತಿದೆ ಎಚ್​ಐವಿ ಸೋಂಕಿತ ರಕ್ತ

ಬ್ಲಡ್ ಬ್ಯಾಂಕ್​ಗಳಿಗೆ ಬರುತ್ತಿದೆ ಎಚ್​ಐವಿ ಸೋಂಕಿತ ರಕ್ತ
ಆರೋಗ್ಯ ಇಲಾಖೆ ನಿರಂತರವಾಗಿ ಕಲುಷಿತ ಆಹಾರ ಪೂರೈಕೆ ತಾಣಗಳ ಮೇಲೆ ದಾಳಿ ಮಾಡಿ ಕಳಪೆ ಆಹಾರ ಮಾರಟ ಹಾಗೂ ವ್ಯಾಪರಿಗಳನ್ನು ಬೆಂಡೆತ್ತುತ್ತಿದೆ
WEBNEWS KANNADA


ಬೆಂಗಳೂರು, ಜುಲೈ 15: ಆಹಾರ ಮತ್ತು ಆರೋಗ್ಯ ಇಲಾಖೆ (Karnataka Health Department) ಕಳೆದ ಕೆಲವು ತಿಂಗಳುಗಳಿಂದ ಜನರ ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಲು ಮುಂದಾಗಿದೆ. ಅಪಾಯಕಾರಿಯಾದ ಕೃತಕ ಬಣ್ಣ ನಿಷೇಧ, ರಾಸಾಯನಿಕಗಳ ಬಳಕೆಗೆ ಕಡಿವಾಣ ಸೇರಿದಂತೆ ಹಲವು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಮಧ್ಯೆ, ಆರೋಗ್ಯ ಇಲಾಖೆ ಮತ್ತೊಂದ್ದು ಪ್ರಯೋಗಕ್ಕೂ ಮುಂದಾಗಿದೆ. ಔಷಧ ನಿಯಂತ್ರಣ ಮಂಡಳಿಗೆ (blood bank)ರಕ್ತ ನಿಧಿ ಘಟಕಗಳ (Blood Banks) ಬಗ್ಗೆ ಹೆಚ್ಚು ಹಣ ಸೂಲಿಗೆ ಬಗ್ಗೆ ಸಾಲು ಸಾಲು ದೂರುಗಳು ಬಂದ ಕಾರಣ ಬ್ಲಡ್ ಘಟಕಗಳಿಗೆ ಭೇಟಿ ನೀಡಿ ಸ್ಯಾಂಪಲ್ಸ್ ಸಂಗ್ರಹಿಸಲು ಮುಂದಾಗಿದೆ. ಮತ್ತೊಂದೆಡೆ, ರಕ್ತನಿಧಿ ಘಟಕಗಳಿಗೆ ಅಪಾಯಕಾರಿ ಎಚ್​​ಐವಿ ಸೋಂಕಿತ ರಕ್ತ ಬರುತ್ತಿವೆ ಎಂಬ ಆರೋಪಗಳು ಆತಂಕಕ್ಕೆ ಕಾರಣವಾಗಿವೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close