Webnews kannada

WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭ ವೀರು ಶೆಟ್ಟಿ, ಧರ್ಮಸ್ಥಳ - webnews kannada

 

ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭ ವೀರು ಶೆಟ್ಟಿ, ಧರ್ಮಸ್ಥಳ - webnews kannada

ಉಜಿರೆ :  ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ.

By Webnewskannada



ಉಜಿರೆ :  ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ. ನೀರಲ್ಲದರೂ ಹಾಕು, ಹಾಲಲ್ಲಾದರೂ  ಹಾಕು ಎನ್ನುವ ಹಾಗೇ ನೀರಲ್ಲಿ ಮೀನನಾಗಿ, ಹಾಲಿನಲ್ಲಿ ಕೆನೆಯಾಗಿ ಬದುಕುಬೇಕು ಇದೇ ರೀತಿಯಲ್ಲಿ ನಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು. ಇಂದು ಪುರುಷ-ಮಹಿಳೆಯರು ಸಮಾನವಾಗಿ ವೃತ್ತಿಯಾಗಿ ನಡೆಸುತ್ತಿದ್ದಾರೆ. ಕಲಿಕೆ ಅನ್ನುವುದು ನಿರಂತರವಾಗಿ ಇರುವುದು ಅದನ್ನು ನಾವು ಅನುಸರಿಸಬೇಕು. ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ  ಪ್ರತಿಯೊಬ್ಬರು ವೃತ್ತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ  ಯಶಸ್ಸು ಕಾಣಬಹುದು ಜೊತೆಗೆ ಬಹುಮುಖ್ಯವಾಗಿ ದುರಭ್ಯಾಸಗಳಿಂದ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು ವೃತ್ತಿಯಲ್ಲಿ ಮುನ್ನಡೇರಿ. ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ  ತರಬೇತಿ ನೀಡಿ ಯುವಜನರಿಗೆ ಅನುಕೂಲ ಮಾಡಿದ್ದಾರೆ. ಇದು ಪ್ರಪಂಚಕ್ಕೆ ಮಾದರಿಯಾಗಿದೆ. ಎಂದು  *ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ತನ ಟ್ರಸ್ಟ್ ಕಾರ್ಯದರ್ಶಿಗಳಾದ ಶ್ರೀ ವೀರು ಶೆಟ್ಟಿ* ಅಭಿಪ್ರಾಯಪಟ್ಟರು.


ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ * ಮೆನ್ಸ್ ಪಾರ್ಲರ್ ಸೆಲೂನ್  ಉದ್ಯಮಿ  ತರಬೇತಿಯ  ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ  ವಿತ್ತರಿಸಿ ಮಾತನಾಡಿದರು.ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು  ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು  ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ *ಶ್ರೀ ಬಿ.ಪಿ.ವಿಜಯ ಕುಮಾರ್* ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ,ಶ್ರೀ *ಲೋಕೇಶ್* ಮತ್ತು  ಶ್ರೀ *ರವಿ ಕುಮಾರ್ ಕಡೂರು*, ಉಪಸ್ಥಿತರಿದ್ದರು


ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ *ನಿರ್ದೇಶಕರಾದ ಶ್ರೀ ಅಜೇಯ*  ಅವರು ಸ್ವಾಗತಿಸಿದರು. ಸಂಸ್ಥೆಯ *ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್*  ಕಾರ್ಯಕ್ರಮ ನಿರೂಪಿಸಿದರು *ಉಪನ್ಯಾಸಕರಾದ *ಕೆ.ಕರುಣಾಕರ ಜೈನ್* ವಂದಿಸಿದರು. ಸುಮಾರು 35 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಮಂಜುನಾಥ, ಪ್ರಕ್ವಲ್, ರಕ್ಷಿತ್  ತರಬೇತಿಯ ಅನುಭವ ಹಂಚಿಕೊಂಡರು.






Share this post

See previous post See next post
Advertisement