Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಉಡುಪಿಯಲ್ಲಿ Artificial Intelligence ಆರ್ಟಿಫಿಶಲ್ ಇಂಟಲಿಜೆನ್ಸ್ ಸಂಚಾರ ವ್ಯವಸ್ಥೆ ಅನುಷ್ಠಾನ: ಎಸ್ಪಿ ಹರಿರಾಂ ಶಂಕರ್ Udupi: SP Hariram Shankar

ಉಡುಪಿಯಲ್ಲಿ ಆರ್ಟಿಫಿಶಲ್ ಇಂಟಲಿಜೆನ್ಸ್ ಸಂಚಾರ ವ್ಯವಸ್ಥೆ ಅನುಷ್ಠಾನ: ಎಸ್ಪಿ ಹರಿರಾಂ ಶಂಕರ್

ಉಡುಪಿಯಲ್ಲಿ ಆರ್ಟಿಫಿಶಲ್ ಇಂಟಲಿಜೆನ್ಸ್ ಸಂಚಾರ ವ್ಯವಸ್ಥೆ ಅನುಷ್ಠಾನ: ಎಸ್ಪಿ ಹರಿರಾಂ ಶಂಕರ್
Implementation of Artificial Intelligence Traffic System in Udupi: SP Hariram Shankar



Implementation of Artificial Intelligence Traffic System in Udupi: SP Hariram Shankar

ಉಡುಪಿ: ಉಡುಪಿ ನಗರ ಹಾಗೂ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಮಣಿಪಾಲದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ನಗರದಲ್ಲಿ ಸಂಚಾರಕ್ಕೆ ಸಂಬಂಧಿಸಿ ಸಿಸಿ ಕ್ಯಾಮೆರಾ ಅಳವಡಿಸುವ ಸಂಬಂಧ ಮೂರು ಪ್ರಾಜೆಕ್ಟ್‌ಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೆಜ್‌ಮೆಂಟ್ ಸಿಸ್ಟಮ್ ನಡಿ ಏಳು ಜಂಕ್ಷನ್‌ಗಳಲ್ಲಿ 14 ಕ್ಯಾಮೆರಾಗಳನ್ನು ಆಳವಡಿಸಲು ಉದ್ದೇಶಿಸಲಾಗಿದೆ. ಅದೇ ರೀತಿ ನಗರಸಭೆಯ 50ಲಕ್ಷ ರೂ. ಅನುದಾನದಲ್ಲಿ ನಾಲ್ಕು ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದರು.
ಈ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ದಂಡ ವಿಧಿಸಲಾಗುವುದು. ದಂಡದ ನೋಟೀಸ್ ನೇರವಾಗಿ ಅವರ ಮನೆಗಳಿಗೆ ಕಳುಹಿಸುವ ವ್ಯವಸ್ಥೆ ಆರಂಭಿಸಲಾಗುವುದು. ಹೀಗೆ ಎಲ್ಲ ವ್ಯವಸ್ಥೆಯನ್ನು ಅಟೋಮೆಟಿಕ್ ಮಾಡಲಾಗುವುದು. ಇನ್ನು ಟ್ರಾಫಿಕ್ ಪೊಲೀಸರು ನಿಂತು ದಂಡ ವಿಧಿಸುವ ಕ್ರಮವನ್ನು ಕ್ರಮೇಣ ಕಡಿಮೆ ಮಾಡಲಾಗುವುದು ಎಂದು ಅವರು ಹೇಳಿದರು.
ಇದೇ ಯೋಜನೆಗೆ ಉಡುಪಿ ನಗರಸಭೆಯಿಂದ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಹಣದಲ್ಲಿ ನಗರಸಭೆ ವ್ಯಾಪ್ತಿಯ 3-4 ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಇದು ಕೂಡ Ai ಆರ್ಟಿಫಿಶಲ್ ಇಂಟೆಲಿಜೆನ್ಸ್‌ ಸಿಸ್ಟಮ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದರಿಂದ ನಗರ ಮತ್ತು ಜಿಲ್ಲಾ ಗಡಿ ಪ್ರದೇಶದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರನ್ನು ಕ್ಯಾಮೆರಾ ಮೂಲಕ ಪತ್ತೆ ಹಚ್ಚಿ ದಂಡ ವಿಧಿಸಲು ಅನುಕೂಲವಾಗುತ್ತದೆ ಎಂದು ಎಸ್ಪಿ ತಿಳಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close