ಶ್ರೀ ವಿನಾಯಕ ಯುವಕ ಮಂಡಲದಿಂದ ಗೋವಿಗಾಗಿ ಮೇವು ಕಾರ್ಯಕ್ರಮ
ಶ್ರೀ ವಿನಾಯಕ ಯುವಕ ಮಂಡಲದಿಂದ ಗೋವಿಗಾಗಿ ಮೇವು ಕಾರ್ಯಕ್ರಮ
ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸತತ 4 ನೇ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿರಿಯಾರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಪ್ರದೀಪ್ ಬಲ್ಲಾಳ ಮಾತನಾಡಿ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ ಯುವಕ ಮಂಡಲವು ಅರ್ಥಪೂರ್ಣವಾದ ಕಾರ್ಯಕ್ರಮ ನಡೆಸಿದೆ. ಗೋವುಗಳ ಹಸಿವು ನೀಗಿಸುವಲ್ಲಿ ಇವರ ಶ್ರಮ ಶ್ಲಾಘನೀಯ ಎಂದರು. ಗೋವಿಗಾಗಿ ಮೇವು ಕಾರ್ಯಕ್ರಮದ ಸಂಚಾಲಕ ಶ್ರೀ ಪ್ರಥ್ವಿರಾಜ್ ಶೆಟ್ಟಿ ಮಾತನಾಡಿ ಶ್ರೀ ವಿನಾಯಕ ಮಂಡಲವು ಗೋವಿಗಾಗಿ ಮೇವು ಅಭಿಯಾನಕ್ಕೆ ಪ್ರತಿವರ್ಷ ನೆರವಾಗಿ ಕಾರ್ಯಕ್ರಮ ಯಶಸ್ಸುಗೊಳಿಸುವಲ್ಲಿ ಸಹಕರಿಸುತ್ತಿದ್ದಾರೆ. ಯುವಕ ಮಂಡಲ ನಿರಂತರ ಸಮಾಜಮುಖಿ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದರು.
ಈ ಸಂದರ್ಭದಲ್ಲಿ ನೂರ ಐವತ್ತು ಕ್ಕೂ ಮಿಕ್ಕಿ ಹುಲ್ಲಿನ ಪಿಂಡಿಯನ್ನು ನೀಲಾವರ ಗೋ ಶಾಲೆಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ, ಕಾರ್ಯದರ್ಶಿ ಶ್ರೀ ಸುಧಾಕರ ನಾಯ್ಕ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸತತ 4 ನೇ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿರಿಯಾರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಪ್ರದೀಪ್ ಬಲ್ಲಾಳ ಮಾತನಾಡಿ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ ಯುವಕ ಮಂಡಲವು ಅರ್ಥಪೂರ್ಣವಾದ ಕಾರ್ಯಕ್ರಮ ನಡೆಸಿದೆ. ಗೋವುಗಳ ಹಸಿವು ನೀಗಿಸುವಲ್ಲಿ ಇವರ ಶ್ರಮ ಶ್ಲಾಘನೀಯ ಎಂದರು. ಗೋವಿಗಾಗಿ ಮೇವು ಕಾರ್ಯಕ್ರಮದ ಸಂಚಾಲಕ ಶ್ರೀ ಪ್ರಥ್ವಿರಾಜ್ ಶೆಟ್ಟಿ ಮಾತನಾಡಿ ಶ್ರೀ ವಿನಾಯಕ ಮಂಡಲವು ಗೋವಿಗಾಗಿ ಮೇವು ಅಭಿಯಾನಕ್ಕೆ ಪ್ರತಿವರ್ಷ ನೆರವಾಗಿ ಕಾರ್ಯಕ್ರಮ ಯಶಸ್ಸುಗೊಳಿಸುವಲ್ಲಿ ಸಹಕರಿಸುತ್ತಿದ್ದಾರೆ. ಯುವಕ ಮಂಡಲ ನಿರಂತರ ಸಮಾಜಮುಖಿ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದರು.
ಈ ಸಂದರ್ಭದಲ್ಲಿ ನೂರ ಐವತ್ತು ಕ್ಕೂ ಮಿಕ್ಕಿ ಹುಲ್ಲಿನ ಪಿಂಡಿಯನ್ನು ನೀಲಾವರ ಗೋ ಶಾಲೆಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ, ಕಾರ್ಯದರ್ಶಿ ಶ್ರೀ ಸುಧಾಕರ ನಾಯ್ಕ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.


