Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶಿವಮೊಗ್ಗ: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್

ಶಿವಮೊಗ್ಗ: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್


ಶಿವಮೊಗ್ಗ, ಡಿಸೆಂಬರ್ 02: ಸೋಮವಾರ ಶಿವಮೊಗ್ಗದ (Shivamogga) ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಕೆಎಸ್ಆರ್‌ಟಿಸಿ ಬಸ್‌ನ ಕೆಳಭಾಗದಲ್ಲಿ ನಾಡಬಾಂಬ್ ಸ್ಫೋಟಗೊಂಡಿದ್ದು (Country Bomb Blast) , ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್ ದೊಡ್ಡ ಅನಾಹುವೇನೂ ಆಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳೆ ರಕ್ಷಣೆಗೆ ನಾಡಬಾಂಬ್​ ಬಳಸುತ್ತಿದ್ದ ರೈತರು

ಮುಡಬಸಿದ್ಧಾಪುರದಿಂದ ಶಿಕಾರಿಪುರಕ್ಕೆ ಆಗಮಿಸುತ್ತಿದ್ದ ಬಸ್ ಹಿರೇಕಲವತ್ತಿಯ ಬಳಿ ಸ್ಫೋಟ ಸಂಭವಿಸಿದ್ದು, ಜೋರಾದ ಸ್ಫೋಟದ ಸದ್ದಿನಿಂದಾಗಿ ಬಸ್ ತಕ್ಷಣವೇ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿದ್ದ ಟಿಸಿಗೆ ಡಿಕ್ಕಿ ಹೊಡೆದು ನಿಂತಿತ್ತು. ಬಸ್ ನಿಲ್ಲಿಸಿದ ಚಾಲಕ ಮತ್ತು ನಿರ್ವಾಹಕರಿಬ್ಬರೂ ಪರಿಶೀಲನೆಗೆಂದು ಇಳಿದಾಗ ನಾಡಬಾಂಬ್ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದೆ. ಹಂದಿಗಳಿಂದ ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ನಾಡಬಾಂಬ್​ಗಳನ್ನು ಬಳಸುತ್ತಿದ್ದು,ಬಾಂಬ್ ಕೊಂಡೊಯ್ಯುವ ವೇಳೆ ರಸ್ತೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಸ್ಫೋಟದಿಂದ ತಪ್ಪಿಸಿಕೊಂಡ 45 ವಿದ್ಯಾರ್ಥಿಗಳು

ಅದೃಷ್ಟವಶಾತ್ 7 ನಿಮಿಷಗಳ ಹಿಂದೆಯೇ 45 ವಿದ್ಯಾರ್ಥಿಗಳು ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಅನಾಹುತದಿಂದ ಪಾರಾಗಿದ್ದಾರೆ. ಘಟನೆಯ ನಂತರ ಮಾತನಾಡಿರುವ ಬಸ್ ಚಾಲಕ ಬಸವರಾಜ್, ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close