ಕೊಪ್ಪಳ : ಪ್ರೀವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಅಪಘಾತ; ನವಜೋಡಿ ಸಾವು
ಕೊಪ್ಪಳ : ಪ್ರೀವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಅಪಘಾತ; ನವಜೋಡಿ ಸಾವು!
ಗಂಗಾವತಿ : ಇನ್ನೇನು ಹಸೆಮಣೆಗೆ ಕಾಲಿಡುವ ಕನಸಿನಲ್ಲಿದ್ದ ಜೋಡಿಯೊಂದು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಇಂತಹದ್ದೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಕುಟುಂಬದವರ ಜೊತೆ ಈ ವಿಚಾರ ಕೇಳಿದವರಿಗೂ ಮನವೂ ಕಲಕದೇ ಇರದು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ
(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.ಮದುವೆ ನಿಶ್ಚಯವಾಗಿತ್ತು
ಇವರು 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ. 21 ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದಲ್ಲಿ ಮದುವೆ ತಯಾರಿಯೂ ನಡೆದಿತ್ತು. ಇವರಿಬ್ಬರೂ ಪ್ರೀವೆಡ್ಡಿಂಗ್ ಶೂಟಿಂಗ್ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆಗೆ ಹೋಗಿ ವಾಪಸ್ ಬರುತ್ತಿದ್ದರು.
ಕವಿತಾರನ್ನು ಗಂಗಾವತಿಯಲ್ಲಿರುವ ಅವರ
ಮನೆಗೆ ಬಿಟ್ಟು ಹೋಗಲು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿ ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡಿದ್ದರು. ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!
ಗಂಗಾವತಿ : ಇನ್ನೇನು ಹಸೆಮಣೆಗೆ ಕಾಲಿಡುವ ಕನಸಿನಲ್ಲಿದ್ದ ಜೋಡಿಯೊಂದು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಇಂತಹದ್ದೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಕುಟುಂಬದವರ ಜೊತೆ ಈ ವಿಚಾರ ಕೇಳಿದವರಿಗೂ ಮನವೂ ಕಲಕದೇ ಇರದು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ
(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.ಮದುವೆ ನಿಶ್ಚಯವಾಗಿತ್ತು ಇವರು 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ. 21 ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದಲ್ಲಿ ಮದುವೆ ತಯಾರಿಯೂ ನಡೆದಿತ್ತು. ಇವರಿಬ್ಬರೂ ಪ್ರೀವೆಡ್ಡಿಂಗ್ ಶೂಟಿಂಗ್ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆಗೆ ಹೋಗಿ ವಾಪಸ್ ಬರುತ್ತಿದ್ದರು. ಕವಿತಾರನ್ನು ಗಂಗಾವತಿಯಲ್ಲಿರುವ ಅವರ
ಮನೆಗೆ ಬಿಟ್ಟು ಹೋಗಲು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿ ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡಿದ್ದರು. ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

