Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪುಟಿನ್​ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ Narendra Modi-webnews kannada

ಪುಟಿನ್​ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ  ಪ್ರಧಾನಿ ಮೋದಿ Narendra Modi-webnews kannada 

ಭಾರತಕ್ಕೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ

ಪುಟಿನ್​ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ  ಪ್ರಧಾನಿ ಮೋದಿ Narendra Modi-webnews kannada
PM Modi gifts Bhagavad Gita to Putin Narendra Modi-webnews kannada

ನವದೆಹಲಿ, ಡಿಸೆಂಬರ್ 05: ಭಾರತಕ್ಕೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಪವಿತ್ರ ಗ್ರಂಥವು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದೆ ಎಂದು ಹೇಳಿದ್ದಾರೆ. ಇಬ್ಬರೂ ನಾಯಕರು ಪುಸ್ತಕವನ್ನು ಹಿಡಿದುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಮೋದಿ ಈ ಕ್ಷಣವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.ಲೋಕ ಕಲ್ಯಾಣ್ ಮಾರ್ಗದಲ್ಲಿರುವ ನಿವಾಸದಲ್ಲಿ ಈ ಸಭೆ ನಡೆದಿದ್ದು, ಮೋದಿ ಅವರು ರಷ್ಯಾ ಅಧ್ಯಕ್ಷರನ್ನು ಖಾಸಗಿ ಭೋಜನಕ್ಕೆ ಸ್ವಾಗತಿಸುತ್ತಿದ್ದಂತೆ ಭಾರತ-ರಷ್ಯಾ ಧ್ವಜಗಳು ಮತ್ತು ವಿಶೇಷ ಬೆಳಕಿನಿಂದ ಅಲಂಕರಿಸಲಾಗಿತ್ತು. ಪುಟಿನ್ ಎರಡು ದಿನಗಳ ರಾಜ್ಯ ಭೇಟಿಗಾಗಿ ಸಂಜೆ ದೆಹಲಿಗೆ ಬಂದಿಳಿದಿದ್ದರು.
ಕಾಲವು ತುಂಬಾ ಶಕ್ತಿಶಾಲಿ ಎಂದು ಹೇಳಲಾಗುತ್ತದೆ. ಕಾಲಚಕ್ರವು ಒಂದಲ್ಲ ಒಂದು ದಿನ ಅನಿವಾರ್ಯವಾಗಿ ತಿರುಗುತ್ತದೆ. ಅದೇ ರೀತಿ, ಭಾರತ ಮತ್ತು ರಷ್ಯಾ ನಡುವಿನ ಸಂಬಂಧದಲ್ಲಿ ಕಾಲಚಕ್ರ ತಿರುಗಿದೆ.ರಷ್ಯಾ ಒಮ್ಮೆ ಭಗವದ್ಗೀತೆಯನ್ನು ನಿಷೇಧಿಸಲು ಹೊರಟಿತ್ತು, ಆದರೆ ಇಂದು ಅದೇ ಹಿಂದೂ ಪವಿತ್ರ ಗ್ರಂಥವಾದ ಗೀತೆಯನ್ನು ಪುಟಿನ್ ಅವರ ಕೈಯಲ್ಲಿದೆ. 2011 ರಲ್ಲಿ, ಭಗವದ್ಗೀತೆಯು ರಷ್ಯಾದ ಸೈಬೀರಿಯಾ ಪ್ರಾಂತ್ಯದ ಟಾಮ್ಸ್ಕ್‌ನಲ್ಲಿರುವ ನ್ಯಾಯಾಲಯವನ್ನು ತಲುಪಿತ್ತು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close